Last Updated:
ಪಂದ್ಯದ ಕೊನೆಯ ಓವರ್ನಲ್ಲಿ ಭಾರತ ತಂಡದ ಗೆಲುವಿಗೆ 16 ರನ್ಗಳ ಅವಶ್ಯಕತೆಯಿತ್ತು. ಹಾಗಾಗಿ ಪಂದ್ಯ ಡ್ರಾನಲ್ಲಿ ಅಂತ್ಯಗೊಳ್ಳಬಹುದು ಎಂದು ಎಲ್ಲರೂ ಭಾವಿಸಿದ್ದರು. ಪ್ರಮುಖ ಕಾರಣ ಕ್ರೀಸ್ನಲ್ಲಿದ್ದದ್ದು ಬೌಲರ್ ಮೊಹಮ್ಮದ್ ಸಿರಾಜ್. ಸಿರಾಜ್ ಬೌಲರ್ ಆಗಿರುವುದರಿಂದ ಅವರಿಂದ 16 ರನ್ ಸಿಡಿಸುವುದು ಅಸಾಧ್ಯ ಎಂದೇ ನಂಬಲಾಗಿತ್ತು. ಆದರೆ ಸಿರಾಜ್ ಎಲ್ಲರ ಲೆಕ್ಕಾಚಾರವನ್ನ ಉಲ್ಟಾ ಮಾಡಿದರು.
ಶ್ರೀಲಂಕಾ ಇಲೆವೆನ್ (India Sri Lanka XI) ವಿರುದ್ಧದ 3 ದಿನಗಳ ಅಭ್ಯಾಸ ಪಂದ್ಯದಲ್ಲಿ ಭಾರತ ತಂಡ ಕೊನೆಯ ಎಸೆತದಲ್ಲಿ ಜಯ ಸಾಧಿಸಿದೆ. ಟೀಮ್ ಇಂಡಿಯಾ ಸ್ಟಾರ್ ಬೌಲರ್ ಮೊಹಮ್ಮದ್ ಸಿರಾಜ್ ಬ್ಯಾಟಿಂಗ್ನಲ್ಲೂ ಅಬ್ಬರಿಸಿ ಶ್ರೀಲಂಕಾ ಇಲೆವೆನ್ ತಂಡವನ್ನ ಧೂಳೀಪಟ ಮಾಡಿದರು. ಡ್ರಾ ಕಡೆಗೆ ಸಾಗುತ್ತಿದ್ದ ಪಂದ್ಯವನ್ನು ಕೊನೆಯ ಓವರ್ನಲ್ಲಿ ಸತತ 3 ಸಿಕ್ಸರ್ ಬಾರಿಸುವ ಮೂಲಕ ಭಾರತ ತಂಡಕ್ಕೆ ಸಿರಾಜ್ ಐತಿಹಾಸಿಕ ಜಯ ತಂದುಕೊಟ್ಟಿದ್ದಾರೆ. ಟಿ20ಯಂತೆ ಬ್ಯಾಟ್ ಬೀಸಿದ ಸಿರಾಜ್ ಕೇವಲ 15 ಎಸೆತಗಳಲ್ಲಿ 32 ರನ್ ಸಿಡಿಸಿ ಗೆಲುವಿನ ರೂವಾರಿಯಾದರು.














