IRE vs IND: ಐರ್ಲೆಂಡ್ ಪ್ರವಾಸಕ್ಕೂ ಮುನ್ನ ಭಾರತಕ್ಕೆ ಮತ್ತೊಂದು ಆಘಾತ! ಪಾಂಡ್ಯ ಬಳಿಕ ಇನ್ನೊಬ್ಬ ಸ್ಟಾರ್ ಪ್ಲೇಯರ್ ಕಿಕ್ ಔಟ್ | ಕ್ರೀಡಾ ಸುದ್ದಿ | ACTPnews

ಟೀಮ್ ಇಂಡಿಯಾ


Last Updated:

ಐರ್ಲೆಂಡ್ ವಿರುದ್ಧದ ಎರಡು ಪಂದ್ಯಗಳ ಟಿ20ಐ ಸರಣಿ ಆರಂಭವಾಗುವ ಮುನ್ನ ಭಾರತ ಮತ್ತೊಂದು ಆಘಾತವನ್ನು ಎದುರಿಸಿದೆ. ಹಾರ್ದಿಕ್ ಪಾಂಡ್ಯ ಬಳಿಕ ಸ್ಟಾರ್ ಆಲ್‌ರೌಂಡರ್ ಪ್ಲೇಯರ್ ಐರ್ಲೆಂಡ್ ಪ್ರವಾಸದಿಂದ ಹೊರಗುಳಿದಿದ್ದಾರೆ.

ಟೀಮ್ ಇಂಡಿಯಾ
ಟೀಮ್ ಇಂಡಿಯಾ

ಜೂನ್ 26 ರಿಂದ ಪ್ರಾರಂಭವಾಗುವ ಐರ್ಲೆಂಡ್ (Ireland )ವಿರುದ್ಧ ಎರಡು ಪಂದ್ಯಗಳ (Matches) ಟಿ20ಐ ಸರಣಿಯನ್ನು ಟೀಮ್ ಇಂಡಿಯಾ (Team India) ಆಡಲಿದೆ. ಗಾಯದ ಕಾರಣದಿಂದಾಗಿ ಹಾರ್ದಿಕ್ ಪಾಂಡ್ಯ (Hardik Pandya) ಮತ್ತು ವರುಣ್ ಚಕ್ರವರ್ತಿ (varun chakravarthy) ಈಗಾಗಲೇ ಸರಣಿಯಿಂದ ಹೊರಗುಳಿದಿದ್ದಾರೆ. ಈಗ, ಐರ್ಲೆಂಡ್ ವಿರುದ್ಧದ ಮೊದಲ ಟಿ20ಐಗೆ ಕೇವಲ ಮೂರು ದಿನಗಳ ಮೊದಲು, ಟೀಮ್ ಇಂಡಿಯಾ ದೊಡ್ಡ ಹಿನ್ನಡೆ ಅನುಭವಿಸಿದೆ.

ಸ್ಟಾರ್ ಆಲ್‌ರೌಂಡರ್ ನಿತೀಶ್ ಕುಮಾರ್ ರೆಡ್ಡಿ ಗಾಯಗೊಂಡಿದ್ದಾರೆ. ಪರಿಣಾಮ ನಿತೀಶ್ ಕುಮಾರ್ ರೆಡ್ಡಿ ಐರ್ಲೆಂಡ್ ವಿರುದ್ಧದ ಟಿ20ಐ ಸರಣಿಯಿಂದ ಹೊರಗುಳಿದಿದ್ದಾರೆ. ಇಂಗ್ಲೆಂಡ್ ವಿರುದ್ಧದ ಮುಂಬರುವ ವೈಟ್-ಬಾಲ್ ಸರಣಿಯಲ್ಲಿ ಅವರು ಆಡುವ ಅನುಮಾನ ವ್ಯಕ್ತವಾಗುತ್ತಿದೆ.

ಇಂಡಿಯಾ ಟಿವಿ ವರದಿಗಳ ಪ್ರಕಾರ, ನಿತೀಶ್ ಕುಮಾರ್ ರೆಡ್ಡಿ ಅವರ ಎಡ ಕ್ವಾಡ್ರೈಸ್ಪ್ಸ್‌ನಲ್ಲಿ (ತೊಡೆಯ ಸ್ನಾಯು) ಗಂಭೀರ ಗಾಯವಾಗಿರುವುದು ಎಂಆರ್‌ಐನಲ್ಲಿ ಕಂಡುಬಂದಿದೆ. ಪರಿಣಾಮವಾಗಿ, ಬಿಸಿಸಿಐ ಅವರನ್ನು ಬೆಂಗಳೂರಿನ ಸಿಒಇಗೆ ತೆರಳಿ ಚೇತರಿಕೆ ಪ್ರಕ್ರಿಯೆಯನ್ನು ಪ್ರಾರಂಭಿಸಲು ಕೇಳಿಕೊಂಡಿದೆ.

ಇಂಗ್ಲೆಂಡ್ ಪ್ರವಾಸದಿಂದಲೂ ಔಟ್?

ನಿತೀಶ್ ಕುಮಾರ್ ಚೇತರಿಸಿಕೊಳ್ಳಲು ಸಮಯ ಬೇಕಾಗುತ್ತದೆ. ಹೀಗಾಗಿ ಐರ್ಲೆಂಡ್ ವಿರುದ್ಧದ ಎರಡು ಪಂದ್ಯಗಳ ಟಿ20ಐ ಸರಣಿಯವರೆಗೆ ಅವರು ಸಂಪೂರ್ಣವಾಗಿ ಫಿಟ್ ಆಗಿರುವುದಿಲ್ಲ. ಟೀಮ್ ಇಂಡಿಯಾಕ್ಕೆ ಅವರು ಸ್ಫೋಟಕ ಬ್ಯಾಟಿಂಗ್ ಜೊತೆಗೆ ಉಪಯುಕ್ತ ಬೌಲಿಂಗ್ ಆಯ್ಕೆಯಾಗಿದ್ದರು. ಆದ್ದರಿಂದ, ಅವರ ಅನುಪಸ್ಥಿತಿಯು ಟೀಮ್ ಇಂಡಿಯಾಕ್ಕೆ ದೊಡ್ಡ ಹೊಡೆತವಾಗಿದೆ.

ಇಂಗ್ಲೆಂಡ್ ವಿರುದ್ಧದ ಟಿ20 ಮತ್ತು ಏಕದಿನ ಸರಣಿಯಿಂದ ನಿತೀಶ್ ಕುಮಾರ್ ರೆಡ್ಡಿ ಹೊರಗುಳಿಯುವ ಸಾಧ್ಯತೆಯಿದೆ ಎಂದು ವರದಿಗಳು ಹೇಳುತ್ತಿವೆ. ಇಂಗ್ಲೆಂಡ್ ವಿರುದ್ಧದ ಭಾರತದ ಐದು ಪಂದ್ಯಗಳ ಟಿ20 ಸರಣಿ ಜುಲೈ 1 ರಿಂದ ಆರಂಭವಾಗಲಿದೆ. ನಿತೀಶ್​ಕುಮಾರ್ ರೆಡ್ಡಿ ಸಂಪೂರ್ಣವಾಗಿ ಚೇತರಿಸಿಕೊಳ್ಳಲು 3-4 ವಾರಗಳು ಬೇಕಾಗಬಹುದು. ಅವರು ಬೇಗನೆ ಚೇತರಿಸಿಕೊಂಡರೆ, ಅವರು ಇಂಗ್ಲೆಂಡ್ ಪ್ರವಾಸದ ಭಾಗವಾಗಬಹುದು. ಕನಿಷ್ಠ ಏಕದಿನ ಸರಣಿಗಾದರೂ ರೆಡ್ಡಿ ಫಿಟ್ ಆಗಿ ಮರಳುತ್ತಾರೆ ಎಂದು ಅಭಿಮಾನಿಗಳು ಆಶಿಸುತ್ತಾರೆ.

ಐರ್ಲೆಂಡ್ ಪ್ರವಾಸಕ್ಕೆ ಭಾರತ ತಂಡ: ಶ್ರೇಯಸ್ ಅಯ್ಯರ್ (ನಾಯಕ), ತಿಲಕ್ ವರ್ಮಾ (ಉಪನಾಯಕ), ವೈಭವ್ ಸೂರ್ಯವಂಶಿ, ಅಭಿಷೇಕ್ ಶರ್ಮಾ, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ಸಂಜು ಸ್ಯಾಮ್ಸನ್, ಇಶಾನ್ ಕಿಶನ್, ಹರ್ಷಿತ್ ರಾಣಾ, ರವಿ ಬಿಷ್ಣೋಯ್, ಪ್ರಸಿದ್ಧ್ ಕೃಷ್ಣ, ಅರ್ಷದೀಪ್ ಸಿಂಗ್, ಶಿವಂ ದುಬೆ, ಪ್ರಿನ್ಸ್ ಯಾದವ್ .



Source link

Leave a Reply

Your email address will not be published. Required fields are marked *

Latest News

View All

Search the Archives

Access over the years of investigative journalism and breaking reports

You May Have Missed