Last Updated:
ರಾಜ್ಯದ ಜಲಾಶಯಗಳಲ್ಲಿ ನೀರಿನ ಮಟ್ಟದಲ್ಲಿ ವ್ಯತ್ಯಾಸ: ಹಾರಂಗಿ, ಆಲಮಟ್ಟಿ, ಹಿಡ್ಕಲ್, ನಾರಾಯಣಪುರ ಭರ್ತಿ. ಕೆ.ಆರ್.ಎಸ್, ಕಬಿನಿ, ಹೇಮಾವತಿ, ತುಂಗಭದ್ರಾ, ಭದ್ರಾ ಜಲಾಶಯಗಳಲ್ಲಿ ನೀರಿನ ಮಟ್ಟ ಸಾಧಾರಣ.
ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆಯ (Rain) ಅಬ್ಬರ ಹಾಗೂ ಒಳಹರಿವಿನ ವ್ಯತ್ಯಾಸದಿಂದಾಗಿ ಕರ್ನಾಟಕದ ಪ್ರಮುಖ ಜಲಾಶಯಗಳ (Reservoirs) ನೀರಿನ ಮಟ್ಟದಲ್ಲಿ (Water Level) ದೊಡ್ಡ ಮಟ್ಟದ ಬದಲಾವಣೆಗಳು ಕಂಡುಬಂದಿವೆ. ನೀರಾವರಿ ಇಲಾಖೆಯ ಇತ್ತೀಚಿನ ಅಧಿಕೃತ ಮಾಹಿತಿಯ ಪ್ರಕಾರ, ಕಾವೇರಿ ಮತ್ತು ಕೃಷ್ಣಾ (Krishna) ನದಿ ಬೇಸಿನ್ನ ಪ್ರಮುಖ ಅಣೆಕಟ್ಟುಗಳಲ್ಲಿ ನೀರಿನ ಸಂಗ್ರಹದ ಸ್ಥಿತಿ ಹೇಗಿದೆ ಎಂಬ ಸಂಪೂರ್ಣ ಚಿತ್ರಣ ಇಲ್ಲಿದೆ. ಕೆಲವು ಜಲಾಶಯಗಳು ಭರ್ತಿಯಾಗುವ ಹಂತದಲ್ಲಿದ್ದರೆ, ಇನ್ನು ಕೆಲವು ಜಲಾಶಯಗಳಲ್ಲಿ ನೀರಿನ ಪ್ರಮಾಣ ನಿರೀಕ್ಷಿತ ಮಟ್ಟಕ್ಕಿಂತ ತಗ್ಗಿದ್ದು, ರೈತರು ಹಾಗೂ ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ.














