Mallikarjun Kharge: ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಗೆ ಬಿಗ್‌ಶಾಕ್! ವಾರಂಟ್ ಜಾರಿ ಮಾಡಿದ ಕೋರ್ಟ್! ಯಾಕೆ? | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews

News18


Last Updated:

Shock to Mallikarjun Kharge: ಪಂಜಾಬ್‌ನ ಸಂಗ್ರೂರ್‌ನ ನ್ಯಾಯಾಲಯವು ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರ ವಿರುದ್ಧ ಬಂಧನ ವಾರಂಟ್ ಹೊರಡಿಸಿದೆ. ಸೆಪ್ಟೆಂಬರ್ 19 ರೊಳಗೆ ನ್ಯಾಯಾಲಯದ ಮುಂದೆ ಹಾಜರಾಗುವಂತೆ ಅವರನ್ನು ಕೇಳಲಾಗಿದೆ.

News18
News18

ನವದೆಹಲಿ: ಎಐಸಿಸಿ ಅಧ್ಯಕ್ಷ, ದೇಶದ ಹಿರಿಯ ರಾಜಕಾರಣಿ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಅವರಿಗೆ ಕಾನೂನು ಆಘಾತ ಉಂಟಾಗಿದೆ. ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರ ವಿರುದ್ಧ ನ್ಯಾಯಾಲಯ ಬಂಧನ ವಾರಂಟ್ ಹೊರಡಿಸಿದೆ.

ಪಂಜಾಬ್‌ನ ಸಂಗ್ರೂರ್‌ನ ನ್ಯಾಯಾಲಯವು ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರ ವಿರುದ್ಧ ಬಂಧನ ವಾರಂಟ್ ಹೊರಡಿಸಿದೆ. ಸೆಪ್ಟೆಂಬರ್ 19 ರೊಳಗೆ ನ್ಯಾಯಾಲಯದ ಮುಂದೆ ಹಾಜರಾಗುವಂತೆ ಅವರನ್ನು ಕೇಳಲಾಗಿದೆ. ಆದರೆ ಮಲ್ಲಿಕಾರ್ಜುನ ಖರ್ಗೆ ವಿರುದ್ಧದ ಈ ವಾರಂಟ್ ಜಾಮೀನು ನೀಡಬಹುದಾಗಿದೆ ಅನ್ನೋದು ಗಮನಿಸಬೇಕಾದ ಸಂಗತಿ.

ಈ ಪ್ರಕರಣವು 2023 ರ ಕರ್ನಾಟಕ ವಿಧಾನಸಭಾ ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಮಾಡಿದ ಭಾಷಣಗಳ ಕುರಿತು ಬಜರಂಗ ದಳ ಸಲ್ಲಿಸಿದ ದೂರಿಗೆ ಸಂಬಂಧಿಸಿದೆ. ದೂರಿನ ಪ್ರಕಾರ, ಮಲ್ಲಿಕಾರ್ಜುನ ಖರ್ಗೆ ಅವರು ಕಾಂಗ್ರೆಸ್ ಚುನಾವಣಾ ಪ್ರಣಾಳಿಕೆಯಲ್ಲಿ ಬಜರಂಗ ದಳವನ್ನು ನಿಷೇಧಿತ ಸಂಘಟನೆ ಪಿಎಫ್‌ಐಗೆ ಹೋಲಿಸಿದ್ದಾರೆ. ನಂತರ ಅವರು ತಮ್ಮ ಪಕ್ಷ ಅಧಿಕಾರಕ್ಕೆ ಬಂದರೆ, ಬಜರಂಗ ದಳವನ್ನು ನಿಷೇಧಿಸುತ್ತದೆ ಎಂದು ಹೇಳಿದ್ದರು.

ಈ ಸಂಬಂಧ ಬಜರಂಗ ದಳ ಸಲ್ಲಿಸಿದ ದೂರಿನ ಪ್ರಕರಣದಲ್ಲಿ ಈಗ ನ್ಯಾಯಾಲಯದಲ್ಲಿ ವಿಚಾರಣೆಗಳು ನಡೆಯುತ್ತಿವೆ. ಈ ಪ್ರಕರಣವು ಈಗ ನ್ಯಾಯಾಂಗ ಪ್ರಕ್ರಿಯೆಯಲ್ಲಿದೆ ಮತ್ತು ನ್ಯಾಯಾಲಯವು ಈ ಪ್ರಕರಣದಲ್ಲಿ ಮುಂದಿನ ನಡೆಗಳ ಬಗ್ಗೆ ನಿರ್ಧರಿಸುತ್ತಿದೆ.

ಏನಿದು ಪ್ರಕರಣ?

ಮಲ್ಲಿಕಾರ್ಜುನ ಖರ್ಗೆ ಅವರು ಬಜರಂಗದಳವನ್ನು ನಿಷೇಧಿತ ಪಿಎಫ್‌ಐಗೆ ಹೋಲಿಸಿದ್ದಾರೆ ಎಂದು ಆರೋಪಿಸಲಾಗಿದೆ. ಹಿಂದುತ್ವ ಸಂಘಟನೆಯೊಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿರುದ್ಧ 100 ಕೋಟಿ ರೂಪಾಯಿಗಳಿಗೆ ಮಾನನಷ್ಟ ಮೊಕದ್ದಮೆ ಹೂಡಿದೆ. 2023 ರ ಕರ್ನಾಟಕ ವಿಧಾನಸಭಾ ಚುನಾವಣೆಯ ಸಮಯದಲ್ಲಿ ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ಬಜರಂಗದಳವನ್ನು ‘ಸಿಮಿ ಮತ್ತು ಅಲ್-ಖೈದಾದಂತಹ ರಾಷ್ಟ್ರವಿರೋಧಿ ಸಂಘಟನೆಗಳಿಗೆ’ ಹೋಲಿಸಿದೆ ಎಂದು ಸಂಗ್ರೂರ್ ಜಿಲ್ಲಾ ನ್ಯಾಯಾಲಯದಲ್ಲಿ ಅರ್ಜಿದಾರರು ಆರೋಪಿಸಿದ್ದಾರೆ.



Source link

Leave a Reply

Your email address will not be published. Required fields are marked *

Latest News

View All

Search the Archives

Access over the years of investigative journalism and breaking reports

You May Have Missed