Last Updated:
Narendra Modi: ದೇಶದಲ್ಲಿ ಭವಿಷ್ಯದಲ್ಲಿ ಎದುರಾಗಬಹುದಾದ ನೀರಿನ ಬಿಕ್ಕಟ್ಟನ್ನು ಎದುರಿಸಲು ಆಧುನಿಕ ತಂತ್ರಜ್ಞಾನ ಹಾಗೂ ಕೃತಕ ಬುದ್ಧಿಮತ್ತೆ (artificial intelligence) ಬಳಕೆ ಅನಿವಾರ್ಯ ಎಂದು ಪ್ರಧಾನಿ ನರೇಂದ್ರ ಮೋದಿ (Prime Minister Narendra Modi) ಹೇಳಿದ್ದಾರೆ.
ದೆಹಲಿ: ದೇಶದ ಭವಿಷ್ಯದ ನೀರಿನ ಬಿಕ್ಕಟ್ಟನ್ನು ಎದುರಿಸಲು ಆಧುನಿಕ ತಂತ್ರಜ್ಞಾನ ಹಾಗೂ ಕೃತಕ ಬುದ್ಧಿಮತ್ತೆ (artificial intelligence) ಬಳಕೆ ಅನಿವಾರ್ಯ ಎಂದು ಪ್ರಧಾನಿ ನರೇಂದ್ರ ಮೋದಿ (Prime Minister Narendra Modi) ಹೇಳಿದ್ದಾರೆ. ಕೇಂದ್ರ ಜಲಶಕ್ತಿ ಸಚಿವಾಲಯ ಆಯೋಜಿಸಿದ್ದ ರಾಷ್ಟ್ರೀಯ ಸಮ್ಮೇಳನದಲ್ಲಿ ಮಾತನಾಡಿದ ಅವರು, ನೀರಿನ ಸಂರಕ್ಷಣೆ ಕೇವಲ ಸರ್ಕಾರಿ ಕೆಲಸವಾಗದೆ ಜನರ ಸಹಭಾಗಿತ್ವದ ಚಳವಳಿಯಾಗಬೇಕು ಎಂದು ಕರೆ ನೀಡಿದರು. ನಗರಗಳ ಜನಸಂಖ್ಯೆ ಹೆಚ್ಚುತ್ತಿರುವ ಕಾರಣ ಭವಿಷ್ಯದ ನೀರಿನ ಬೇಡಿಕೆಯನ್ನು ನಿಭಾಯಿಸಲು ಸ್ಥಳೀಯ ಸಂಸ್ಥೆಗಳು ಸಜ್ಜಾಗಬೇಕು ಎಂದು ಪ್ರಧಾನಿ ಹೇಳಿದರು.














