Last Updated:
ಪವಿತ್ರಾ ಗೌಡ ಸಲ್ಲಿಸಿದ್ದ ಅರ್ಜಿಯನ್ನು ಕೋರ್ಟ್ ಪರಿಗಣಿಸಿದ್ದು, ಆರೋಗ್ಯದ ವಿಚಾರದಲ್ಲಿ ಸಮಸ್ಯೆ ಎದುರಾದರೆ ಬ್ಯಾರಕ್ ಬದಲಾಯಿಸಲು ಅವಕಾಶ ನೀಡಿದೆ.
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ (Renukaswamy Case) ಎ1 ಆರೋಪಿಯಾಗಿರುವ ಪವಿತ್ರಾ ಗೌಡ (Pavitra Gowda) ಸದ್ಯ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ. ಜೈಲಿನಲ್ಲಿನ ಬ್ಯಾರಕ್ನಲ್ಲಿ ಎದುರಾಗಿದ್ದ ಸಮಸ್ಯೆಗಳ ಹಿನ್ನೆಲೆಯಲ್ಲಿ ಬ್ಯಾರಕ್ ಬದಲಾವಣೆ ಮಾಡುವಂತೆ ಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ಇದೀಗ ಈ ಅರ್ಜಿಗೆ ಸಂಬಂಧಿಸಿದಂತೆ ಪವಿತ್ರಾ ಗೌಡಗೆ ಕೊಂಚ ನೆಮ್ಮದಿ ಸಿಕ್ಕಿದೆ. ಅಗತ್ಯವಿದ್ದರೆ ಬೇರೆ ಬ್ಯಾರಕ್ಗೆ ಸ್ಥಳಾಂತರಿಸಲು ಕ್ರಮ ಕೈಗೊಳ್ಳುವಂತೆ 59ನೇ ಸೆಷನ್ಸ್ ಕೋರ್ಟ್ ಸೂಚನೆ ನೀಡಿದೆ.














