Last Updated:
ರಥ ಎಳೆಯುವ ವೇಳೆ ಒಮ್ಮೆಲೇ ಜನರು ನುಗ್ಗಿದ್ದು ಕಾಲ್ತುತಳಿತ ಉಂಟಾಗಿದೆ. ಜನರನ್ನು ನಿಯಂತ್ರಣ ಮಾಡಲು ಪೊಲೀಸರ ಹರಸಾಹಸ ಪಟ್ಟಿದ್ದಾರೆ.
ಒಡಿಶಾ: ಪುರಿ ಜಗನ್ನಾಥ ರಥಯಾತ್ರೆಯಲ್ಲಿ (Puri Jagannath Rath Yatra) ದುರಂತ ಘಟನೆ ಸಂಭವಿಸಿದೆ. ರಥ ಎಳೆಯುವ ವೇಳೆ ಕಾಲ್ತುಳಿತ (Stampede) ಸಂಭವಿಸಿ ಓರ್ವ ಸಾವನ್ನಪ್ಪಿದ್ದು, ಬರೋಬ್ಬರಿ 200 ಮಂದಿ ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂಬ ಮಾಹಿತಿ ಸಿಕ್ಕಿದೆ. ರಥ ಎಳೆಯುವ ವೇಳೆ ಒಮ್ಮೆಲೇ ಜನರು ನುಗ್ಗಿದ್ದು ಕಾಲ್ತುಳಿತ ಉಂಟಾಗಿದೆ. ಜನರನ್ನು ನಿಯಂತ್ರಣ ಮಾಡಲು ಪೊಲೀಸರ (Police) ಹರಸಾಹಸ ಪಟ್ಟಿದ್ದಾರೆ.
ಮೂಲಗಳ ಪ್ರಕಾರ, ಘಟನೆಯಲ್ಲಿ ಒಬ್ಬರು ಸಾವನ್ನಪ್ಪಿದ್ದು, ಗಾಯಗೊಂಡವರಲ್ಲಿ ಹೆಚ್ಚಿನವರು ಮಹಿಳೆಯರು ಮತ್ತು ವೃದ್ಧರು ಎಂದು ತಿಳಿದು ಬಂದಿದೆ. ಗಾಯಾಳುಗಳನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದ್ದು, ಪರಿಸ್ಥಿತಿಯನ್ನು ನಿಯಂತ್ರಿಸಲು ರಕ್ಷಣಾ ತಂಡಗಳನ್ನು ನಿಯೋಜಿಸಲಾಗಿದೆ.














