Radhika Pandit: ‘ಗೊತ್ತಿರೋರಿಗೆ ಮಾತ್ರ ಗೊತ್ತು’ ಎಂದ ರಾಧಿಕಾ ಪಂಡಿತ್; ರಾವಣನ ಪ್ರತಿಮೆ ಜೊತೆಗಿನ ಫೋಟೋ ವೈರಲ್ | | ACTPnews

ರಾಕಿಂಗ್ ಸ್ಟಾರ್ ಯಶ್


Last Updated:

ರಾಕಿಂಗ್ ಸ್ಟಾರ್ ಯಶ್ (Rocking Star Yash) ಅಭಿನಯದ ಬಹುನಿರೀಕ್ಷಿತ ‘ರಾಮಾಯಣ’ (Ramayana) ಚಿತ್ರದ ಟ್ರೇಲರ್ ಬಿಡುಗಡೆಯಾದ ಬಳಿಕ ಸಾಮಾಜಿಕ ಜಾಲತಾಣಗಳಲ್ಲಿ ಅದರ ಬಗ್ಗೆ ಭಾರಿ ಚರ್ಚೆ ನಡೆಯುತ್ತಿದೆ.

ರಾಕಿಂಗ್ ಸ್ಟಾರ್ ಯಶ್
ರಾಕಿಂಗ್ ಸ್ಟಾರ್ ಯಶ್

ರಾಕಿಂಗ್ ಸ್ಟಾರ್ ಯಶ್ (Rocking Star Yash) ಅಭಿನಯದ ಬಹುನಿರೀಕ್ಷಿತ ‘ರಾಮಾಯಣ’ (Ramayana) ಚಿತ್ರದ ಟ್ರೇಲರ್ ಬಿಡುಗಡೆಯಾದ ಬಳಿಕ ಸಾಮಾಜಿಕ ಜಾಲತಾಣಗಳಲ್ಲಿ ಅದರ ಬಗ್ಗೆ ಭಾರಿ ಚರ್ಚೆ ನಡೆಯುತ್ತಿದೆ. ಚಿತ್ರದಲ್ಲಿ ಯಶ್ ರಾವಣನ (Ravana) ಪಾತ್ರದಲ್ಲಿ ಕಾಣಿಸಿಕೊಂಡಿರುವ ಝಲಕ್ ಅಭಿಮಾನಿಗಳ ಕುತೂಹಲವನ್ನು ಮತ್ತಷ್ಟು ಹೆಚ್ಚಿಸಿದೆ. ಇದೇ ಸಂಭ್ರಮದ ನಡುವೆ ಯಶ್ ಪತ್ನಿ ಹಾಗೂ ನಟಿ ರಾಧಿಕಾ ಪಂಡಿತ್ (Radhika Pandit) ಹಂಚಿಕೊಂಡಿರುವ ಹೊಸ ಪೋಸ್ಟ್ ಈಗ ಸೋಷಿಯಲ್ ಮೀಡಿಯಾದಲ್ಲಿ (Social Media) ವೈರಲ್ ಆಗಿದೆ.

ರಾಧಿಕಾ ಪಂಡಿತ್ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಬೃಹತ್ ರಾವಣನ ಮೂರ್ತಿಯ ಮುಂದೆ ನಿಂತಿರುವ ಫೋಟೋವನ್ನು ಹಂಚಿಕೊಂಡಿದ್ದಾರೆ. ಕತ್ತಿ ಮತ್ತು ಗುರಾಣಿ ಹಿಡಿದಿರುವ ರಾವಣನ ಪ್ರತಿಮೆಯ ಎದುರು ಅವರು ಸ್ಟೈಲಿಷ್ ಆಗಿ ಪೋಸ್ ನೀಡಿರುವುದು ವಿಶೇಷವಾಗಿ ಗಮನ ಸೆಳೆದಿದೆ.

ಈ ಫೋಟೋಗೆ ‘ಗೊತ್ತಿರೋರಿಗೆ ಮಾತ್ರ ಗೊತ್ತು’ ಎಂಬ ಕ್ಯಾಪ್ಶನ್ ನೀಡಿದ್ದಾರೆ. ಈ ಒಂದು ಸಾಲು ಅಭಿಮಾನಿಗಳಲ್ಲಿ ಸಾಕಷ್ಟು ಕುತೂಹಲ ಮೂಡಿಸಿದ್ದು, ಅನೇಕರು ಇದನ್ನು ಯಶ್ ಅಭಿನಯದ ‘ರಾಮಾಯಣ’ ಚಿತ್ರದೊಂದಿಗೆ ಸಂಬಂಧಿಸಿ ಚರ್ಚೆ ಮಾಡುತ್ತಿದ್ದಾರೆ.

ಅದೇ ಸಮಯದಲ್ಲಿ ರಾಧಿಕಾ ಪಂಡಿತ್ ರಾವಣನ ಪ್ರತಿಮೆಯೊಂದಿಗೆ ಫೋಟೋ ಹಂಚಿಕೊಂಡಿರುವುದು ಅಭಿಮಾನಿಗಳ ಗಮನ ಸೆಳೆದಿದ್ದು, ಪೋಸ್ಟ್‌ಗೆ ಸಾವಿರಾರು ಲೈಕ್‌ಗಳು ಮತ್ತು ಕಾಮೆಂಟ್‌ಗಳು ಹರಿದು ಬರುತ್ತಿವೆ.

ಈ ಫೋಟೋದಲ್ಲಿ ರಾಧಿಕಾ ಪಂಡಿತ್ ಬಿಳಿ ಬಣ್ಣದ ಪ್ರಿಂಟೆಡ್ ಲಾಂಗ್ ಫ್ರಾಕ್ ಧರಿಸಿದ್ದು, ಕಪ್ಪು ಬಣ್ಣದ ಸನ್‌ಗ್ಲಾಸ್ ಧರಿಸಿ ಸರಳ ಹಾಗೂ ಆಕರ್ಷಕ ಲುಕ್‌ನಲ್ಲಿ ಕಾಣಿಸಿಕೊಂಡಿದ್ದಾರೆ. ಅವರ ಸ್ಟೈಲ್ ಮತ್ತು ಫೋಟೋಗ್ರಫಿಯನ್ನು ಅಭಿಮಾನಿಗಳು ಮೆಚ್ಚಿಕೊಂಡಿದ್ದಾರೆ.

ರಾಧಿಕಾ ಪೋಸ್ಟ್‌ಗೆ ಅಭಿಮಾನಿಗಳು ವಿಭಿನ್ನ ರೀತಿಯಲ್ಲಿ ಪ್ರತಿಕ್ರಿಯಿಸುತ್ತಿದ್ದಾರೆ. ಕೆಲವರು ಇದು ಯಶ್ ಅವರ ‘ರಾಮಾಯಣ’ ಚಿತ್ರದ ಬಗ್ಗೆ ನೀಡಿರುವ ಪರೋಕ್ಷ ಬೆಂಬಲ ಎಂದು ಅಭಿಪ್ರಾಯಪಟ್ಟರೆ, ಇನ್ನೂ ಕೆಲವರು ಕ್ಯಾಪ್ಶನ್ ಹಿಂದಿನ ಅರ್ಥವೇನು ಎಂದು ಊಹೆಗಳನ್ನು ವ್ಯಕ್ತಪಡಿಸುತ್ತಿದ್ದಾರೆ.

ಈ ಬಾರಿಯೂ ‘ರಾಮಾಯಣ’ ಟ್ರೇಲರ್ ಬಿಡುಗಡೆಯಾದ ಸಂದರ್ಭದಲ್ಲಿ ಹಂಚಿಕೊಂಡಿರುವ ಈ ಪೋಸ್ಟ್ ಅಭಿಮಾನಿಗಳ ಗಮನ ಸೆಳೆದಿದ್ದು, ಚಿತ್ರದ ಬಗ್ಗೆ ಇರುವ ನಿರೀಕ್ಷೆಯನ್ನು ಮತ್ತಷ್ಟು ಹೆಚ್ಚಿಸಿದೆ.

ಭಾರತೀಯ ಚಿತ್ರರಂಗದಲ್ಲಿ ವರ್ಷಗಳಿಂದ ಅಪಾರ ನಿರೀಕ್ಷೆ ಮೂಡಿಸಿರುವ ನಿತೇಶ್ ತಿವಾರಿ ನಿರ್ದೇಶನದ ರಾಮಾಯಣ ಚಿತ್ರದ ಟ್ರೇಲರ್ ಕೊನೆಗೂ ಬಿಡುಗಡೆಯಾಗಿದೆ. ಜುಲೈ 30ರ ಮುಂಜಾನೆ ಬಿಡುಗಡೆಯಾದ ಈ ಟ್ರೇಲರ್ ಕೆಲವೇ ಕ್ಷಣಗಳಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ದೇಶ ವಿದೇಶದ ಸಿನಿಪ್ರೇಕ್ಷಕರ ಗಮನ ಸೆಳೆದಿದೆ. ದೃಶ್ಯ ವೈಭವ, ಅದ್ಭುತ ಗ್ರಾಫಿಕ್ಸ್ ಮತ್ತು ಭಾರತೀಯ ಮಹಾಕಾವ್ಯದ ಭವ್ಯತೆಯನ್ನು ಒಂದೇ ವೇದಿಕೆಯಲ್ಲಿ ಕಟ್ಟಿಕೊಟ್ಟಿರುವ ಈ ಟ್ರೇಲರ್‌ಗೆ ಎಲ್ಲೆಡೆಯಿಂದ ಮೆಚ್ಚುಗೆಯ ಮಹಾಪೂರವೇ ಹರಿದುಬಂದಿದೆ.



Source link

Leave a Reply

Your email address will not be published. Required fields are marked *

Latest News

View All

Search the Archives

Access over the years of investigative journalism and breaking reports

You May Have Missed