ರಾಜ್ಯದ ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ, ಬಳ್ಳಾರಿ, ಕೊಪ್ಪಳ, ವಿಜಯಪುರ, ಕಲಬುರ್ಗಿ, ಬೀದರ್, ಯಾದಗಿರಿ ಹಾಗೂ ರಾಯಚೂರು ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಉಳಿದ ಜಿಲ್ಲೆಗಳಲ್ಲಿ ಮೋಡ ಹಾಗೂ ಗಾಳಿಯ ಒತ್ತಡ ಹೆಚ್ಚಿದ್ದರೆ ಅಲ್ಲಲ್ಲಿ ತುಂತುರು ಮಳೆಯ ಸಾಧ್ಯತೆಗಳಿವೆ.ಈಗಿನಂತೆ ಮೇ 28ರಿಂದ ರಾಜ್ಯದ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿವೆ.ಬಂಗಾಳಕೊಲ್ಲಿಯಲ್ಲಿ ಜೂನ್ 3ರಿಂದ ವಾಯುಭಾರ ಕುಸಿತದಂತ ತಿರುವಿಕೆ ಉಂಟಾಗುವ ಸಾಧ್ಯತೆಗಳಿದ್ದು, ಜೂನ್ 4 ರಂದು ಮುಂಗಾರು ಕೇರಳಕ್ಕೆ ಹಾಗೂ 5ರಂದು ರಾಜ್ಯಕ್ಕೆ ಆಗಮಿಸುವ ನಿರೀಕ್ಷೆ ಇದೆ.











