Last Updated:
ಅಪಘಾತದ ಬಗ್ಗೆ ಮಾಹಿತಿ ಪಡೆದ ನಂತರ, ಮೋದಿನಗರ ಎಸಿಪಿ ಭಾಸ್ಕರ್ ವರ್ಮಾ ಮತ್ತು ನಿವಾರಿ ಪೊಲೀಸರು ಸ್ಥಳಕ್ಕೆ ಧಾವಿಸಿ, ಜಖಂಗೊಂಡ ವಾಹನದಿಂದ ಶವಗಳನ್ನು ಹೊರತೆಗೆದು ಮರಣೋತ್ತರ ಪರೀಕ್ಷೆಗೆ ಕಳುಹಿಸಿದರು. ಗಾಯಾಳುಗಳನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಗಾಜಿಯಾಬಾದ್: ವೇಗವಾಗಿ ಬಂದ ಬೊಲೆರೊ ಪಿಕಪ್, ಟ್ರಕ್ಗೆ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ (Road Accident) ಮೂವರು ಯಾತ್ರಿಕರು ಸಾವನ್ನಪ್ಪಿದ್ದು, ಇತರ ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಗಾಜಿಯಾಬಾದ್ನಲ್ಲಿ ನಡೆದಿದೆ.
ಉತ್ತರ ಪ್ರದೇಶದ ಗಾಜಿಯಾಬಾದ್ನ ನಿವಾರಿ ಪೊಲೀಸ್ ಠಾಣೆ ಪ್ರದೇಶದ ಚೌಧರಿ ಚರಣ್ ಸಿಂಗ್ ಕನ್ವರ್ ಮಾರ್ಗದಲ್ಲಿ ಮಂಗಳವಾರ ಬೆಳಗಿನ ಜಾವ 12.30 ರ ಸುಮಾರಿಗೆ ಈ ದುರ್ಘಟನೆ ಸಂಭವಿಸಿದ್ದು, ವೇಗವಾಗಿ ಬಂದ ಬೊಲೆರೊ ಪಿಕಪ್ ಟ್ರಕ್ಗೆ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಮೂವರು ಯಾತ್ರಿಕರು ಸಾವನ್ನಪ್ಪಿದ್ದು, ಇತರ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಎಲ್ಲಾ ಯಾತ್ರಿಕರು ರಾಜಸ್ಥಾನದ ಅಲ್ವಾರ್ ಜಿಲ್ಲೆಯ ಕಲ್ಗಾಂವ್ ಗ್ರಾಮದ ನಿವಾಸಿಗಳಾಗಿದ್ದರು. ಕುಟುಂಬವು ಇತ್ತೀಚೆಗೆ ಪಿಕಪ್ ಟ್ರಕ್ ಖರೀದಿಸಿತ್ತು, ಗಂಗಾ ನದಿಯಲ್ಲಿ ಪವಿತ್ರ ಸ್ನಾನ ಮತ್ತು ದರ್ಶನಕ್ಕಾಗಿ ಹರಿದ್ವಾರಕ್ಕೆ ಪ್ರಯಾಣಿಸುತ್ತಿದ್ದಾಗ ಈ ಅಪಘಾತ ಸಂಭವಿಸಿದೆ ಎಂದು ತಿಳಿದು ಬಂದಿದೆ.
ಅಪಘಾತದ ಬಗ್ಗೆ ಮಾಹಿತಿ ಪಡೆದ ನಂತರ, ಮೋದಿನಗರ ಎಸಿಪಿ ಭಾಸ್ಕರ್ ವರ್ಮಾ ಮತ್ತು ನಿವಾರಿ ಪೊಲೀಸರು ಸ್ಥಳಕ್ಕೆ ಧಾವಿಸಿ, ಜಖಂಗೊಂಡ ವಾಹನದಿಂದ ಶವಗಳನ್ನು ಹೊರತೆಗೆದು ಮರಣೋತ್ತರ ಪರೀಕ್ಷೆಗೆ ಕಳುಹಿಸಿದರು. ಗಾಯಾಳುಗಳನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಎಸಿಪಿ ಭಾಸ್ಕರ್ ವರ್ಮಾ ಅವರ ಪ್ರಕಾರ, ಗಾಜಿಯಾಬಾದ್ ಪೊಲೀಸ್ ಕಮಿಷನರೇಟ್ಗೆ ಜುಲೈ 29, 2026 ರಂದು ಬೆಳಗಿನ ಜಾವ 12.30 ರ ಸುಮಾರಿಗೆ ನಿವಾರಿ ಪೊಲೀಸ್ ಠಾಣೆ ಪ್ರದೇಶದಲ್ಲಿ ಬೊಲೆರೊ ಪಿಕಪ್ ಟ್ರಕ್ ಮತ್ತು ಟ್ರಕ್ ನಡುವೆ ಡಿಕ್ಕಿ ಸಂಭವಿಸಿದ ಬಗ್ಗೆ ಮಾಹಿತಿ ಸಿಕ್ಕಿತು.
‘ಪೊಲೀಸರು ತಕ್ಷಣ ಸ್ಥಳಕ್ಕೆ ತಲುಪಿದಾಗ ಅಪಘಾತದಲ್ಲಿ ಮೂವರು ಸಾವನ್ನಪ್ಪಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ ಎಂದು ತಿಳಿಯಿತು. ಗಾಯಾಳುಗಳನ್ನು ಪ್ರಾಥಮಿಕ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ’ ಎಂದು ಎಸಿಪಿ ಭಾಸ್ಕರ್ ವರ್ಮಾ ಅವರು ಹೇಳಿದರು.
‘ಕುಟುಂಬದವರು ಹೊಸದಾಗಿ ಖರೀದಿಸಿದ ವಾಹನವನ್ನು ಹರಿದ್ವಾರಕ್ಕೆ ದರ್ಶನ ಮತ್ತು ಗಂಗಾ ನದಿಯಲ್ಲಿ ಪವಿತ್ರ ಸ್ನಾನಕ್ಕಾಗಿ ತೆಗೆದುಕೊಂಡು ಹೋಗುತ್ತಿದ್ದಾಗ ಈ ದುರಂತ ಸಂಭವಿಸಿದೆ. ಪೊಲೀಸರು ಟ್ರಕ್, ಅದರ ಚಾಲಕ ಮತ್ತು ಕಂಡಕ್ಟರ್ ಅನ್ನು ವಶಕ್ಕೆ ಪಡೆದಿದ್ದಾರೆ ಮತ್ತು ಮುಂದಿನ ಕಾನೂನು ಕ್ರಮಗಳು ನಡೆಯುತ್ತಿವೆ’ ಎಂದು ಅವರು ಹೇಳಿದರು.
ಕನ್ವರ್ ಯಾತ್ರೆಯ ಸಮಯದಲ್ಲಿ, ಚೌಧರಿ ಚರಣ್ ಸಿಂಗ್ ಕನ್ವರ್ ಮಾರ್ಗವು ಅತ್ಯಂತ ಜನನಿಬಿಡ ಮತ್ತು ಪ್ರಮುಖ ಕಾರಿಡಾರ್ಗಳಲ್ಲಿ ಒಂದಾಗಿದ್ದು, ಲಕ್ಷಾಂತರ ಶಿವಭಕ್ತರು ಕಾಲ್ನಡಿಗೆಯಲ್ಲಿ ತೀರ್ಥಯಾತ್ರೆ ಕೈಗೊಳ್ಳುತ್ತಾರೆ.
New Delhi,Delhi














