Last Updated:
ಜುಲೈ 19 ರಂದು ಲಾರ್ಡ್ಸ್ನಲ್ಲಿ ನಡೆಯಲಿರುವ ಭಾರತ ಮತ್ತು ಇಂಗ್ಲೆಂಡ್ ನಡುವಿನ ಮೂರನೇ ಏಕದಿನ ಪಂದ್ಯವೇ ರೋಹಿತ್ ಅವರ ವೃತ್ತಿಜೀವನದ ಕೊನೆಯ ಪಂದ್ಯವಾಗಲಿದೆ ಎಂದು ಮಾಧ್ಯಮಗಳಲ್ಲಿ ಸುದ್ದಿಯಾಗಿತ್ತು. ಇದರಿಂದ ಅಭಿಮಾನಿಗಳಲ್ಲಿ ತೀವ್ರ ಆಕ್ರೋಶ ವ್ಯಕ್ತವಾದಾಗ, ಬಿಸಿಸಿಐ ಕಾರ್ಯದರ್ಶಿ ದೇವಜಿತ್ ಸೈಕಿಯಾ ಅವರು ಈ ವರದಿಗಳನ್ನು ಸಂಪೂರ್ಣವಾಗಿ ನಿರಾಕರಿಸಿದ್ದರು.
ಭಾರತೀಯ ಕ್ರಿಕೆಟ್ನ (Indian Cricket) ಭವಿಷ್ಯದ ಕುರಿತು ಮುಂಬೈನಲ್ಲಿ ನಿರ್ಣಾಯಕ ಬಿಸಿಸಿಐ ಸಭೆ (BCCI Meeting) ಆರಂಭವಾಗಿದೆ. ಮುಂದಿನ ವರ್ಷದ ವಿಶ್ವಕಪ್ಗೆ ಸಂಬಂಧಿಸಿದ ಹಲವಾರು ಪ್ರಮುಖ ವಿಷಯಗಳ ಕುರಿತು ಪ್ರಧಾನ ಕಚೇರಿಯಲ್ಲಿ ಚರ್ಚೆಗಳು ನಡೆಯುತ್ತಿವೆ. ವಯಸ್ಸಿನ ಕಾರಣದಿಂದ ರೋಹಿತ್ ಶರ್ಮಾ ಅವರ ಭವಿಷ್ಯದ ಬಗ್ಗೆಯೂ ಚರ್ಚಿಸುವುದು ಅನಿವಾರ್ಯವಾಗಿದೆ. ಆದರೆ ಇಂಗ್ಲೆಂಡ್ ಪ್ರವಾಸದ ಸಮಯದಲ್ಲಿ ರೋಹಿತ್ ಶರ್ಮಾ ನಿವೃತ್ತರಾಗಲಿದ್ದಾರೆ ಎಂಬ ವರದಿ ಸಾಕಷ್ಟು ವೈರಲ್ ಆಗಿತ್ತು. ರೋಹಿತ್ ಕೂಡ ಒಪ್ಪಿಕೊಂಡಿದ್ದರು. ಆದರೆ ಆಯ್ಕೆ ಸಮಿತಿಯ ನಡೆಗೆ ಬೇಸತ್ತು ಇದ್ದಕ್ಕಿದ್ದಂತೆ ತಮ್ಮ ಮನಸ್ಸನ್ನು ಬದಲಾಯಿಸಿಕೊಂಡರು ಎಂದು ತಿಳಿದುಬಂದಿದೆ.














