Sad News: ಚಲಿಸುತ್ತಿದ್ದ ರಿಕ್ಷಾದ ಮೇಲೆ ಉರುಳಿಬಿದ್ದ ಮರ! ಐವರು ಸಾವು, ಹಲವರು ಗಂಭೀರ | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews

News18


Last Updated:

ಐದು ಮಂದಿಯನ್ನು ಆಸ್ಪತ್ರೆಗೆ ಕರೆತರಲಾಯಿತಾದರೂ ನಾಲ್ವರು ಆಸ್ಪತ್ರೆಗೆ ತಲುಪುವಷ್ಟರಲ್ಲಿ ಸಾವನ್ನಪ್ಪಿದ್ದಾರೆ ಎಂದು ವೈದ್ಯರು ಘೋಷಿಸಿದರು. ಒಬ್ಬರು ಆಸ್ಪತ್ರೆಯಲ್ಲಿ ನಿಧನರಾದರು ಎಂದು ವೈದ್ಯಕೀಯ ಕಾಲೇಜಿನ ಪ್ರಾಂಶುಪಾಲ ಯೋಗೇಶ್ ಗೋಯಲ್ ತಿಳಿಸಿದ್ದಾರೆ.

News18
News18

ಫಿರೋಜಾಬಾದ್: ಭಾರೀ ಬಿರುಗಾಳಿಯಿಂದಾಗಿ ಮರವೊಂದು ಉರುಳಿ ಪ್ರಯಾಣಿಕರು ಸಂಚರಿಸುತ್ತಿದ್ದ ಇ-ರಿಕ್ಷಾದ ಮೇಲೆ ಬಿದ್ದ ಪರಿಣಾಮ ಐವರು ಸಾವನ್ನಪ್ಪಿ, ಹಲವರು ಗಾಯಗೊಂಡಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.

ಉತ್ತರ ಪ್ರದೇಶದ ಫಿರೋಜಾಬಾದ್‌ನ ಚಿಧ್ರೈ ಗ್ರಾಮದ ಬಳಿ ನಿನ್ನೆ ಸಂಜೆ 7:30 ರ ಸುಮಾರಿಗೆ ಬಲವಾದ ಗಾಳಿ ಬೀಸಿದಾಗ ಈ ಅಪಘಾತ ಸಂಭವಿಸಿದೆ ಎಂದು ತಿಳಿದು ಬಂದಿದೆ. ಪ್ರತ್ಯಕ್ಷದರ್ಶಿಗಳ ಪ್ರಕಾರ, ಮರವು ಮಹಿಳೆಯರು, ಮಕ್ಕಳು ಮತ್ತು ವೃದ್ಧರು ಸೇರಿದಂತೆ ಏಳರಿಂದ ಎಂಟು ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಇ-ರಿಕ್ಷಾದ ಮೇಲೆ ಬಿದ್ದಿದೆ ಎಂದು ಹೇಳಲಾಗಿದೆ.

ಗಾಯಾಳುಗಳನ್ನು ವೈದ್ಯಕೀಯ ಕಾಲೇಜಿಗೆ ಸ್ಥಳಾಂತರಿಸಲಾಯಿತು, ಅಲ್ಲಿ ವೈದ್ಯರು ಐದು ಜನರು ಸಾವನ್ನಪ್ಪಿದ್ದಾರೆ ಎಂದು ಘೋಷಿಸಿದರು. ಮೃತರನ್ನು ಹರೇಶ್, ವಿಷ್ಣು, ಗಜೇಂದ್ರ, ಅಮನ್ ಮತ್ತು ಗಂಗಾ ಸಿಂಗ್ ಎಂದು ಗುರುತಿಸಲಾಗಿದೆ.

ಇಖು ಗ್ರಾಮದ ನಿವಾಸಿ ಹರೇಶ್ ಅವರ ಮೊಮ್ಮಗ ರಾಜ್ ಕಪೂರ್, ಫರಿಹಾದಿಂದ ಮನೆಗೆ ಹಿಂತಿರುಗುತ್ತಿದ್ದಾಗ ಅಪಘಾತ ಸಂಭವಿಸಿದೆ ಎಂದು ಹೇಳಿದ್ದಾರೆ.

ಜಿಲ್ಲಾ ಮ್ಯಾಜಿಸ್ಟ್ರೇಟ್ ಸಂತೋಷ್ ಕುಮಾರ್ ಶರ್ಮಾ ಮೃತರ ಸಾವನ್ನು ದೃಢಪಡಿಸಿದ್ದಾರೆ. ‘ಎಲ್ಲಾ ಬಾಧಿತ ವ್ಯಕ್ತಿಗಳಿಗೆ ನೈಸರ್ಗಿಕ ವಿಕೋಪ ಪರಿಹಾರ ನಿಬಂಧನೆಗಳ ಅಡಿಯಲ್ಲಿ ಸಹಾಯ ನೀಡಲಾಗುವುದು’ ಎಂದು ಶರ್ಮಾ ಹೇಳಿದರು.



Source link

Leave a Reply

Your email address will not be published. Required fields are marked *

Search the Archives

Access over the years of investigative journalism and breaking reports