Last Updated:
ನೀಟ್ ಪೇಪರ್ ಲೀಕ್ ಪ್ರಕರಣದ (NEET Paper Leak Case) ವಿರುದ್ಧ ದೆಹಲಿಯ ಜಂತರ್ ಮಂತರ್ನಲ್ಲಿ (Jantar Mantar) ನಡೆಯುತ್ತಿರುವ ಪ್ರತಿಭಟನೆ ದೇಶದಾದ್ಯಂತ ಗಮನ ಸೆಳೆದಿದೆ. ಈ ಹೋರಾಟಕ್ಕೆ ಹಲವು ಗಣ್ಯರು ಮತ್ತು ಕಲಾವಿದರು ಬೆಂಬಲ ಸೂಚಿಸಿರುವ ನಡುವೆ, ಬಾಲಿವುಡ್ ನಟ ಸಲ್ಮಾನ್ ಖಾನ್ ಮತ್ತೊಮ್ಮೆ ಈ ವಿಚಾರವಾಗಿ ತಮ್ಮ ಅಭಿಪ್ರಾಯವನ್ನು ಹಂಚಿಕೊಂಡಿದ್ದಾರೆ.
ನೀಟ್ ಪೇಪರ್ ಲೀಕ್ ಪ್ರಕರಣದ (NEET Paper Leak Case) ವಿರುದ್ಧ ದೆಹಲಿಯ ಜಂತರ್ ಮಂತರ್ನಲ್ಲಿ (Jantar Mantar) ನಡೆಯುತ್ತಿರುವ ಪ್ರತಿಭಟನೆ ದೇಶದಾದ್ಯಂತ ಗಮನ ಸೆಳೆದಿದೆ. ಈ ಹೋರಾಟಕ್ಕೆ ಹಲವು ಗಣ್ಯರು ಮತ್ತು ಕಲಾವಿದರು ಬೆಂಬಲ ಸೂಚಿಸಿರುವ ನಡುವೆ, ಬಾಲಿವುಡ್ ನಟ ಸಲ್ಮಾನ್ ಖಾನ್ (Salman Khan) ಮತ್ತೊಮ್ಮೆ ಈ ವಿಚಾರವಾಗಿ ತಮ್ಮ ಅಭಿಪ್ರಾಯವನ್ನು ಹಂಚಿಕೊಂಡಿದ್ದಾರೆ. ವಿದ್ಯಾರ್ಥಿಗಳ ಸುರಕ್ಷತೆ ಮತ್ತು ಭವಿಷ್ಯಕ್ಕೆ ಆದ್ಯತೆ ನೀಡುವಂತೆ ಕರೆ ನೀಡಿರುವ ಅವರು, ಸಾಮಾಜಿಕ ಕಾರ್ಯಕರ್ತ ಸೋನಮ್ ವಾಂಗ್ಚುಕ್ ಅವರಿಗೆ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸುವಂತೆ ಮನವಿ ಮಾಡಿದ್ದಾರೆ.
ತಮ್ಮ ಸಾಮಾಜಿಕ ಜಾಲತಾಣದ ಹೊಸ ಪೋಸ್ಟ್ನಲ್ಲಿ ಸಲ್ಮಾನ್ ಖಾನ್ ವಿದ್ಯಾರ್ಥಿಗಳು ಮತ್ತು ಪೋಷಕರ ಆತಂಕವನ್ನು ಉಲ್ಲೇಖಿಸಿದ್ದಾರೆ. ಶಿಕ್ಷಣವು ಪ್ರತಿಯೊಬ್ಬ ವಿದ್ಯಾರ್ಥಿಯ ಹಕ್ಕಾಗಿದ್ದು, ಅವರ ಸುರಕ್ಷತೆ ಎಲ್ಲಕ್ಕಿಂತ ಮುಖ್ಯ ಎಂದು ಅವರು ಹೇಳಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಈ ವಿಚಾರವಾಗಿ ಈಗಾಗಲೇ ಭರವಸೆ ನೀಡಿದ್ದಾರೆ ಎಂದು ಉಲ್ಲೇಖಿಸಿರುವ ಸಲ್ಮಾನ್, ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದಲ್ಲಿ ತಪ್ಪಿತಸ್ಥರ ವಿರುದ್ಧ ಸರ್ಕಾರ ಕಠಿಣ ಕ್ರಮ ಕೈಗೊಳ್ಳುತ್ತದೆ ಎಂಬ ವಿಶ್ವಾಸವನ್ನು ವ್ಯಕ್ತಪಡಿಸಿದ್ದಾರೆ.
ಜೊತೆಗೆ ವಿದ್ಯಾರ್ಥಿಗಳು ಮತ್ತು ಅವರ ಪೋಷಕರು ಆತಂಕ ಪಡುವ ಅಗತ್ಯವಿಲ್ಲ. ಸರ್ಕಾರ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸುತ್ತದೆ ಎಂಬ ನಂಬಿಕೆ ನನಗಿದೆ ಎಂಬ ಅರ್ಥದ ಸಂದೇಶವನ್ನು ಹಂಚಿಕೊಂಡಿದ್ದಾರೆ.
ಸಲ್ಮಾನ್ ಖಾನ್ ತಮ್ಮ ಪೋಸ್ಟ್ನಲ್ಲಿ ಸಾಮಾಜಿಕ ಕಾರ್ಯಕರ್ತ ಸೋನಮ್ ವಾಂಗ್ಚುಕ್ ಅವರನ್ನು ನೇರವಾಗಿ ಉದ್ದೇಶಿಸಿ ಭಾವನಾತ್ಮಕ ಮನವಿ ಮಾಡಿದ್ದಾರೆ. ಸೋನಮ್ ಭಾವ್, ಈಗ ಸಾಕು. ದಯವಿಟ್ಟು ಉಪವಾಸ ಸತ್ಯಾಗ್ರಹವನ್ನು ಇಲ್ಲಿಗೇ ಮುಗಿಸಿ. ಅಗತ್ಯ ಬಂದರೆ ಮುಂದೆ ಮತ್ತೆ ಹೋರಾಡಬಹುದು. ಆದರೆ ಈಗ ನಿಮ್ಮ ಆರೋಗ್ಯ ಮುಖ್ಯ. ದಯವಿಟ್ಟು ಏನಾದರೂ ಆಹಾರ ಸೇವಿಸಿ ಎಂದು ಮನವಿ ಮಾಡಿದ್ದಾರೆ.
ಈಗ ಅವರು ಹೋರಾಟದ ಉದ್ದೇಶವನ್ನು ಬೆಂಬಲಿಸುತ್ತಲೇ, ಪ್ರತಿಭಟನೆ ಶಾಂತಿಯುತವಾಗಿ ಅಂತ್ಯಗೊಳ್ಳಬೇಕು ಮತ್ತು ವಿದ್ಯಾರ್ಥಿಗಳು ಸುರಕ್ಷಿತವಾಗಿ ಮನೆಗಳಿಗೆ ಮರಳಬೇಕು ಎಂಬ ಸಂದೇಶ ನೀಡಿದ್ದಾರೆ.
ಸಲ್ಮಾನ್ ಖಾನ್ ಅವರ ಈ ಹೊಸ ಪೋಸ್ಟ್ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಚರ್ಚೆಗೆ ಕಾರಣವಾಗಿದೆ. ಕೆಲವರು ಅವರ ಮನವಿಯನ್ನು ಮೆಚ್ಚಿಕೊಂಡಿದ್ದರೆ, ಇನ್ನೂ ಕೆಲವರು ವಿವಿಧ ರೀತಿಯ ಅಭಿಪ್ರಾಯಗಳನ್ನು ವ್ಯಕ್ತಪಡಿಸುತ್ತಿದ್ದಾರೆ.
ವಿಶೇಷವಾಗಿ ಸೋನಮ್ ವಾಂಗ್ಚುಕ್ ಅವರನ್ನು ಉದ್ದೇಶಿಸಿ ಬರೆದಿರುವ ಸಂದೇಶ ಹೆಚ್ಚು ವೈರಲ್ ಆಗಿದ್ದು, ಹಲವು ಬಳಕೆದಾರರು ಅದರ ಬಗ್ಗೆ ತಮ್ಮ ಪ್ರತಿಕ್ರಿಯೆಗಳನ್ನು ಹಂಚಿಕೊಳ್ಳುತ್ತಿದ್ದಾರೆ.
Bangalore [Bangalore],Bangalore,Karnataka
Salman Khan: ಪಿಎಂ ಮೋದಿ ಪರವಾಗಿ ನಾನು ನಿಮಗೆ ಭರವಸೆ ನೀಡುತ್ತೇನೆ! ವಾಂಗ್ಚುಕ್, ವಿದ್ಯಾರ್ಥಿಗಳಿಗೆ ವಿಶೇಷ ಮನವಿ ಮಾಡಿದ ಸಲ್ಮಾನ್ ಖಾನ್














