Smriti Mandhana: ಹರ್ಮನ್‌ಪ್ರೀತ್ ಕೌರ್‌ಗೆ ಚೆಕ್​ಮೇಟ್​ ಇಟ್ಟ ಸ್ಮೃತಿ! ಮೊದಲ ಬಾರಿಗೆ ಭಾರತ ನಾಯಕತ್ವದ ಬಗ್ಗೆ ಮಂಧಾನಾ ಮಾತು | ಕ್ರೀಡಾ ಸುದ್ದಿ | ACTPnews


Last Updated:

ಸ್ಮೃತಿ ಮಂಧಾನ ಭಾರತೀಯ ಮಹಿಳಾ ಕ್ರಿಕೆಟ್ ತಂಡದ ನಾಯಕತ್ವಕ್ಕೆ ಪ್ರಬಲ ಸ್ಪರ್ಧಿಯಾಗಿ ಹೊರಹೊಮ್ಮಿದ್ದಾರೆ. ಅವರು 18 ಟಿ20 ಅಂತರರಾಷ್ಟ್ರೀಯ ಪಂದ್ಯಗಳು ಮತ್ತು ನಾಲ್ಕು ಏಕದಿನ ಪಂದ್ಯಗಳಲ್ಲಿ ತಂಡವನ್ನು ಮುನ್ನಡೆಸಿದ್ದಾರೆ, ಟಿ20ಯಲ್ಲಿ ಒಟ್ಟು 15 ಪಂದ್ಯಗಳಲ್ಲಿ ತಂಡವನ್ನು ಗೆಲುವಿನತ್ತ ಕೊಂಡೊಯ್ದಿದ್ದಾರೆ. ಅವರ ನಾಯಕತ್ವದಲ್ಲಿ ಆಡಿದ ನಾಲ್ಕು ಏಕದಿನ ಪಂದ್ಯಗಳಲ್ಲಿ ಭಾರತ ತಂಡವು ಅಜೇಯವಾಗಿ ಉಳಿದಿದೆ.

ಹರ್ಮನ್​​​ಪ್ರೀತ್ ಕೌರ್- ಸ್ಮೃತಿ ಮಂಧಾನ
ಹರ್ಮನ್​​​ಪ್ರೀತ್ ಕೌರ್- ಸ್ಮೃತಿ ಮಂಧಾನ

ಭಾರತೀಯ ಮಹಿಳಾ ಕ್ರಿಕೆಟ್ ತಂಡದ ಸ್ಟಾರ್ ಓಪನರ್ ಸ್ಮೃತಿ ಮಂಧಾನಾ (Smriti Mandhana) ಟೀಮ್​ ಇಂಡಿಯಾ ನಾಯಕತ್ವದ ಬಗ್ಗೆ ತಮ್ಮ ಅಭಿಪ್ರಾಯಗಳನ್ನು ಬಹಿರಂಗಪಡಿಸಿದ್ದು, ತಾವೂ ಯಾವುದೇ ಜವಾಬ್ದಾರಿಗಳನ್ನು ವಹಿಸಿಕೊಳ್ಳಲು ಸಿದ್ಧ ಎಂದು ಹೇಳಿದ್ದಾರೆ. ಪ್ರಸ್ತುತ ನಾಯಕಿ ಹರ್ಮನ್‌ಪ್ರೀತ್ ಕೌರ್ (Harmanpreet Kaur) ಅವರ ನಂತರ ಭವಿಷ್ಯದಲ್ಲಿ ನಾಯಕತ್ವ ವಹಿಸಿಕೊಳ್ಳಲು ಸಿದ್ಧ ಎಂದು ಮಂಧಾನಾ ಸ್ಪಷ್ಟಪಡಿಸಿದ್ದಾರೆ. ಪ್ರಸ್ತುತ ತಂಡದ ಉಪನಾಯಕಿಯಾಗಿ ಸೇವೆ ಸಲ್ಲಿಸುತ್ತಿರುವ ಮಂಧಾನಾ ಕಳೆದ ಕೆಲವು ವರ್ಷಗಳಿಂದ ಹರ್ಮನ್‌ಪ್ರೀತ್ ಕೌರ್ ಅವರ ನಾಯಕತ್ವದಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಹರ್ಮನ್‌ಪ್ರೀತ್ ಕೌರ್ ಲಭ್ಯವಿಲ್ಲದಿದ್ದಾಗ ಹಲವಾರು ಸಂದರ್ಭಗಳಲ್ಲಿ ಮಧ್ಯಂತರ ನಾಯಕಿಯಾಗಿ ಭಾರತ ತಂಡವನ್ನು ಗೆಲುವಿನತ್ತ ಕೊಂಡೊಯ್ದ ಅನುಭವವೂ ಅವರಿಗಿದೆ.

ಭಾರತೀಯ ಮಹಿಳಾ ತಂಡದ ನಾಯಕತ್ವದಲ್ಲಿ ಸಂಭಾವ್ಯ ಬದಲಾವಣೆಯ ಕುರಿತು ಪ್ರಶ್ನಿಸಲಾಯಿತು. ಭವಿಷ್ಯದಲ್ಲಿ ನಾಯಕತ್ವದ ಪಾತ್ರವನ್ನು ವಹಿಸಿದರೆ ಅದನ್ನು ಸ್ವೀಕರಿಸಲು ಸಿದ್ಧರಿದ್ದೀರಾ ಎಂದು ಕೇಳಿದಾಗ, ಅವರು ಆತ್ಮವಿಶ್ವಾಸದಿಂದ ಹೌದು, ನಾನು ಖಂಡಿತವಾಗಿಯೂ ಅದಕ್ಕೆ ಸಿದ್ಧ ಎಂದು ಉತ್ತರಿಸಿದರು. ಹೆಚ್ಚಿನ ಒತ್ತಡದ ಪಂದ್ಯಗಳ ಸಮಯದಲ್ಲಿಯೂ ಸಹ ತಂಡವನ್ನು ಮುನ್ನಡೆಸುವ ಮತ್ತು ಶಾಂತ ನಿರ್ಧಾರಗಳನ್ನು ತೆಗೆದುಕೊಳ್ಳುವ ಟ್ರ್ಯಾಕ್ ರೆಕಾರ್ಡ್ ಅನ್ನು ಅವರು ಹೊಂದಿದ್ದಾರೆ. ಈ ಪ್ರತಿಭೆಯೇ ಅವರನ್ನು ನಾಯಕತ್ವದ ಸ್ಪರ್ಧೆಯಲ್ಲಿ ಇರಿಸಿದೆ. ಸ್ಮೃ

ಸ್ಮೃತಿ ಮಂಧಾನ ಅವರ ನಾಯಕತ್ವ ದಾಖಲೆ

ಸ್ಮೃತಿ ಮಂಧಾನ ಭಾರತೀಯ ಮಹಿಳಾ ಕ್ರಿಕೆಟ್ ತಂಡದ ನಾಯಕತ್ವಕ್ಕೆ ಪ್ರಬಲ ಸ್ಪರ್ಧಿಯಾಗಿ ಹೊರಹೊಮ್ಮಿದ್ದಾರೆ. ಅವರು 18 ಟಿ20 ಅಂತರರಾಷ್ಟ್ರೀಯ ಪಂದ್ಯಗಳು ಮತ್ತು ನಾಲ್ಕು ಏಕದಿನ ಪಂದ್ಯಗಳಲ್ಲಿ ತಂಡವನ್ನು ಮುನ್ನಡೆಸಿದ್ದಾರೆ, ಟಿ20ಯಲ್ಲಿ ಒಟ್ಟು 15 ಪಂದ್ಯಗಳಲ್ಲಿ ತಂಡವನ್ನು ಗೆಲುವಿನತ್ತ ಕೊಂಡೊಯ್ದಿದ್ದಾರೆ. ಅವರ ನಾಯಕತ್ವದಲ್ಲಿ ಆಡಿದ ನಾಲ್ಕು ಏಕದಿನ ಪಂದ್ಯಗಳಲ್ಲಿ ಭಾರತ ತಂಡವು ಅಜೇಯವಾಗಿ ಉಳಿದಿದೆ.

ಲಾರ್ಡ್ಸ್​ನಲ್ಲಿ ನಾಯಕತ್ವದ ಬಗ್ಗೆ ಮಾತು

‘ಕ್ರಿಕೆಟ್‌ನ ಮೆಕ್ಕಾ’ ಎಂದು ಕರೆಯಲ್ಪಡುವ ಲಾರ್ಡ್ಸ್ ಕ್ರಿಕೆಟ್ ಮೈದಾನದಲ್ಲಿ ಭಾರತ ಪಡೆದ ಐತಿಹಾಸಿಕ ಗೆಲುವಿನ ನಂತರ ಸ್ಮೃತಿ ಮಂಧಾನ ಈ ಹೇಳಿಕೆ ನೀಡಿದ್ದಾರೆ. ಲಾರ್ಡ್ಸ್‌ನಲ್ಲಿ ನಡೆದ ಐತಿಹಾಸಿಕ ಮಹಿಳಾ ಟೆಸ್ಟ್ ಪಂದ್ಯದಲ್ಲಿ, ಭಾರತ ತಂಡ ಇಂಗ್ಲೆಂಡ್ ವಿರುದ್ಧ 270 ರನ್‌ಗಳ ಬೃಹತ್ ಗೆಲುವು ಸಾಧಿಸಿದೆ. ಭಾರತ ಮೊದಲ ಇನ್ನಿಂಗ್ಸ್‌ನಲ್ಲಿ 285 ರನ್ ಗಳಿಸಿತ್ತು, ಇಂಗ್ಲೆಂಡ್ ತಂಡವನ್ನ 170ಕ್ಕೆ ನಿಯಂತ್ರಿಸಿತ್ತು. ಎರಡನೇ ಇನ್ನಿಂಗ್ಸ್‌ನಲ್ಲಿ 7 ವಿಕೆಟ್‌ಗೆ 341 ರನ್ ಗಳಿಸಿ ಡಿಕ್ಲೇರ್ ಮಾಡಿತು. ನಂತರ ಭಾರತೀಯ ಬೌಲರ್‌ಗಳು ಇಂಗ್ಲೆಂಡ್ ತಂಡವನ್ನು 2ನೇ ಇನ್ನಿಂಗ್ಸ್‌ನಲ್ಲಿ 186 ರನ್‌ಗಳಿಗೆ ಆಲೌಟ್ ಮಾಡಿ ಗೆಲುವನ್ನು ಖಚಿತಪಡಿಸಿದರು.

ಎರಡೂ ಇನ್ನಿಂಗ್ಸ್​​ನಲ್ಲೂ ಮಿಂಚಿದ ಮಂಧಾನ

ಸ್ಮೃತಿ ಮಂಧಾನ ಈ ಪಂದ್ಯದಲ್ಲಿ ಪ್ರಮುಖ ಪಾತ್ರ ವಹಿಸಿದರು, ಮೊದಲ ಇನ್ನಿಂಗ್ಸ್‌ನಲ್ಲಿ 83 ರನ್ ಗಳಿಸಿದರು ಮತ್ತು ಎರಡನೇ ಇನ್ನಿಂಗ್ಸ್‌ನಲ್ಲಿ 70 ರನ್​ಗಳಿಸಿ ಭಾರತದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ್ದರು.

ಎರಡು ಡಬ್ಲ್ಯೂಪಿಎಲ್ ಗೆದ್ದಿರುವ ಮಂಧಾನ

ಸ್ಮೃತಿ ಮಂಧಾನ ಅವರ ನಾಯಕತ್ವದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವು ಮಹಿಳಾ ಪ್ರೀಮಿಯರ್ ಲೀಗ್ (WPL) ಇತಿಹಾಸದಲ್ಲಿ ಎರಡು ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದೆ.

2024ರ ಸೀಸನ್‌ನಲ್ಲಿ ಸ್ಮೃತಿ ಮಂಧಾನ ಆರ್‌ಸಿಬಿ ತಂಡವನ್ನು ಮುನ್ನಡೆಸಿ, ಫೈನಲ್‌ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಗೆಲುವು ಸಾಧಿಸುವ ಮೂಲಕ ಫ್ರಾಂಚೈಸಿಗೆ ಚೊಚ್ಚಲ WPL ಕಿರೀಟ ತಂದುಕೊಟ್ಟಿದ್ದರು. 2026ರ ಫೆಬ್ರವರಿಯಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಆರ್‌ಸಿಬಿ ತಂಡವು ಡೆಲ್ಲಿ ಕ್ಯಾಪಿಟಲ್ಸ್ ನೀಡಿದ 203 ರನ್‌ಗಳ ಬೃಹತ್ ಗುರಿಯನ್ನು ಬೆನ್ನಟ್ಟಿ ಎರಡನೇ ಬಾರಿಗೆ ಚಾಂಪಿಯನ್ ಆಯಿತು. ಈ ಪಂದ್ಯದಲ್ಲಿ ನಾಯಕಿ ಸ್ಮೃತಿ ಮಂಧಾನ ಕೇವಲ 41 ಎಸೆತಗಳಲ್ಲಿ 87 ರನ್ ಚಚ್ಚಿ ‘ಪ್ಲೇಯರ್ ಆಫ್ ದಿ ಮ್ಯಾಚ್’ ಪ್ರಶಸ್ತಿ ಪಡೆದರು. ಅಲ್ಲದೆ 377 ರನ್ ಗಳಿಸುವ ಮೂಲಕ ಈ ಸೀಸನ್‌ನ ‘ಆರೆಂಜ್ ಕ್ಯಾಪ್’ ಕೂಡ ಮುಡಿಗೇರಿಸಿಕೊಂಡಿದ್ದರು.



Source link

Leave a Reply

Your email address will not be published. Required fields are marked *