Last Updated:
7 ದಿನಗಳಿಂದ ಶಾಂತಿಯುತ ಪ್ರತಿಭಟನೆ ಮಾಡುತ್ತಿದ್ದ ವಿದ್ಯಾರ್ಥಿಗಳು ಜಗನ್ನಾಥಪುರ ದೇವಸ್ಥಾನದ ಬಳಿ ಅಳವಡಿಸಲಾಗಿದ್ದ ಮೂರು ಹಂತದ ಪೊಲೀಸ್ ಬ್ಯಾರಿಕೇಡ್ಗಳನ್ನು ಮುರಿದು ವಿಧಾನಸೌಧದತ್ತ ಮುನ್ನುಗ್ಗಿದರು. ಈ ವೇಳೆ ಪ್ರತಿಭಟನಾಕಾರರನ್ನು ಚದುರಿಸಲು ಪೊಲೀಸರು ಮೊದಲು ಜಲಫಿರಂಗಿ ಬಳಸಿದರು.
ಜಾರ್ಖಂಡ್ನ ರಾಂಚಿಯಲ್ಲಿ JPSC ಮತ್ತು JSSC ನೇಮಕಾತಿ ಪರೀಕ್ಷೆಗಳ ಅಕ್ರಮಗಳನ್ನು ವಿರೋಧಿಸಿ ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ ಸಾವಿರಾರು ವಿದ್ಯಾರ್ಥಿಗಳ ಮೇಲೆ ಪೊಲೀಸರು ಲಾಠಿಚಾರ್ಜ್, ಜಲಫಿರಂಗಿ (Water Cannons) ಮತ್ತು ಅಶ್ರುವಾಯು ಪ್ರಯೋಗಿಸಿದ್ದಾರೆ. 17 ದಿನಗಳಿಂದ ನಡೆಯುತ್ತಿರುವ ಈ ಪ್ರತಿಭಟನೆಯು ತೀವ್ರ ಸ್ವರೂಪ ಪಡೆದುಕೊಂಡಿದ್ದು, ಪೊಲೀಸರ ಬಲಪ್ರಯೋಗದಿಂದಾಗಿ ಹಲವು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ.














