Tag: ಚನ
-

‘ಮಾಜಿ ಮತ್ತು ಹಾಲಿ ರಕ್ಷಣಾ ಅಧಿಕಾರಿಗಳ ಸಲಹೆ ಮೇರೆಗೆ ಭಾರತ ಚೀನಾ ವಿರುದ್ಧ ಹೋರಾಡಬೇಕು‘ – ಎಂಬಿ ಪಾಟೀಲ್ | | ACTPnews
Last Updated:Jun 18, 2020 1:42 PM IST ಈ ಹಿಂದೆ ಭಾರತ-ಚೀನಾ ಗಡಿಯಲ್ಲಿ ಸೇವೆ ಸಲ್ಲಿಸಿದ ಹಿರಿಯ ರಕ್ಷಣಾ ಅಧಿಕಾರಿಗಳ ಅನುಭವ ಬಳಸಿಕೊಳ್ಳಬೇಕು. ಎಲ್ಲರ ಸಲಹೆ, ಸೂಚನೆ ಪಡೆದು ಈಗ ಕಾರ್ಯತಂತ್ರ ರೂಪಿಸಬೇಕಾಗಿದೆ. ಇದು ಯಾರನ್ನೂ ಟೀಕೆ ಮಾಡುವ ಸಮಯವಲ್ಲ ಎಂದು ಎಂ. ಬಿ. ಪಾಟೀಲ ತಿಳಿಸಿದರು. ವಿಜಯಪುರ(ಜೂ.18): ಚೀನಾ ವಿಚಾರದಲ್ಲಿ ಭಾರತ ಎಚ್ಚರಿಕೆಯಿಂದ ಕೆಲಸ ಮಾಡಬೇಕಿದೆ. ಈ ಹಿಂದೆ ಗಡಿಯಲ್ಲಿ ಕೆಲಸ ಮಾಡಿದ್ದ ಮಾಜಿ ಮತ್ತು ಹಾಲಿ ಹಿರಿಯ ರಕ್ಷಣಾ ಅಧಿಕಾರಿಗಳ ಸಲಹೆ ಸೂಚನೆ…
-

ಚೀನಾ ವಿರುದ್ಧದ ಸಂಘರ್ಷದಲ್ಲಿ ಗಾಯಗೊಂಡಿದ್ದ 76 ಯೋಧರು ಚೇತರಿಕೆ; ಭಾರತೀಯ ಸೇನೆ ಮಾಹಿತಿ | | ACTPnews
Last Updated:Jun 19, 2020 7:58 AM IST India-China Conflict: ಲೇಹ್ನಲ್ಲಿರುವ ಸೇನಾ ಆಸ್ಪತ್ರೆಯಲ್ಲಿ 18 ಸೈನಿಕರು ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರು 15 ದಿನಗಳಲ್ಲಿ ಕೆಲಸಕ್ಕೆ ವಾಪಾಸಾಗಲಿದ್ದಾರೆ. ಬೇರೆ ಆಸ್ಪತ್ರೆಗಳಲ್ಲಿರುವ 58 ಸೈನಿಕರು ಇನ್ನೊಂದು ವಾರದಲ್ಲಿ ಕೆಲಸಕ್ಕೆ ವಾಪಾಸಾಗಬೇಕೆಂದು ಸೂಚಿಸಲಾಗಿದೆ. ನವದೆಹಲಿ (ಜೂ. 19): ಲಡಾಖ್ ಗಡಿಯಲ್ಲಿರುವ ಗಾಲ್ವಾನ್ ನದಿ ಕಣಿವೆ ಪ್ರದೇಶದಲ್ಲಿ ಸೋಮವಾರ ರಾತ್ರಿಯಿಂದ ಮಂಗಳವಾರದವರೆಗೆ ನಡೆದ ಸಂಘರ್ಷದಲ್ಲಿ ಭಾರತದ 20 ಯೋಧರು, ಚೀನಾದ 40ಕ್ಕೂ ಹೆಚ್ಚು ಸೈನಿಕರು ಸಾವನ್ನಪ್ಪಿದ್ದರು. ಈ ದಾಳಿಯ ವೇಳೆ…
-

ಭಾರತ ಮತ್ತು ಚೀನಾ ಗಡಿಯಲ್ಲಿನ ಸಂಘರ್ಷದ ಬಗ್ಗೆ ಚರ್ಚಿಸಲು ಇಂದು ಸರ್ವ ಪಕ್ಷಗಳ ಸಭೆ | | ACTPnews
Last Updated:Jun 19, 2020 8:42 AM IST ಅಲ್ಲದೆ ಭಾರತದೊಂದಿಗೆ ಕಲಹಕ್ಕೆ ಮುಂದಾಗಿರುವ ಚೀನಾ ಬಗ್ಗೆ ಯಾವ ನಿಲುವು ಹೊಂದಬೇಕು ಎಂಬ ಕುರಿತಾಗಿ ಚರ್ಚೆ ನಡೆಸಲಾಗುತ್ತದೆ. ನವದೆಹಲಿ(ಜೂ.19): ಭಾರತ ಮತ್ತು ಚೀನಾ ಗಡಿಯಲ್ಲಿ ಸೇನೆಗಳ ಸಂಘರ್ಷವಾಗಿರುವ ವಿಷಯದ ಬಗ್ಗೆ ಚರ್ಚಿಸಲು ಪ್ರಧಾನ ಮಂತ್ರಿ ನರೇಂದ್ರ ಮೋದಿ ಇಂದು ಸರ್ವ ಪಕ್ಷಗಳ ನಾಯಕರ ಸಭೆ ಕರೆದಿದ್ದಾರೆ. ಸಂಜೆ 5ಗಂಟೆಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸರ್ವ ಪಕ್ಷಗಳ ನಾಯಕರ ಸಭೆ ನಡೆಯಲಿದ್ದು ಸದ್ಯದ ಪರಿಸ್ಥಿತಿ ಬಗ್ಗೆ ಸಮಾಲೋಚನೆ…
-

ಚೀನಾ ವಶದಲ್ಲಿದ್ದ ಇಬ್ಬರು ಮೇಜರ್ಗಳು ಸೇರಿ 10 ಭಾರತೀಯ ಸೈನಿಕರು ಬಿಡುಗಡೆ | | ACTPnews
Last Updated:Jun 19, 2020 11:30 AM IST ಮೂರು ದಿನಗಳ ಕಾಲ ಮೇಜರ್ ಜನರಲ್ ಮಟ್ಟದಲ್ಲಿ ನಡೆದ ಮಾತುಕತೆಯ ಬಳಿಕ ಭಾರತದ 10 ಯೋಧರನ್ನು ಬಿಡುಗಡೆ ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ. ನವದೆಹಲಿ (ಜೂ. 19): ಲಡಾಖ್ನಲ್ಲಿರುವ ಗಾಲ್ವಾನ್ ಕಣಿವೆಯ ಬಳಿ 4 ದಿನಗಳ ಹಿಂದೆ ನಡೆದ ಚೀನಾ ವಿರುದ್ಧದ ದಾಳಿಯಲ್ಲಿ 20 ಭಾರತೀಯ ಸೈನಿಕರು ಮೃತಪಟ್ಟಿದ್ದರು. ಇನ್ನೂ 76 ಸೈನಿಕರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ನಡುವೆ ಚೀನಾ ದೇಶದ ವಶದಲ್ಲಿದ್ದ 10 ಭಾರತೀಯ…
-

ಭಾರತದ ಯಾವ ಪ್ರದೇಶವನ್ನೂ ಚೀನಾ ಆಕ್ರಮಿಸಿಕೊಂಡಿಲ್ಲ; ಸರ್ವಪಕ್ಷ ಸಭೆಯಲ್ಲಿ ಪಿಎಂ ಮೋದಿ ಹೇಳಿಕೆ | | ACTPnews
Last Updated:Jun 20, 2020 7:52 AM IST ಗಡಿಯಲ್ಲಿ ಚೀನಾ ಮಾಡಿದ ಕೆಲಸಕ್ಕೆ ಇಡೀ ದೇಶವೇ ಬೇಸರ ಹಾಗೂ ಆಕ್ರೋಶ ಹೊರಹಾಕಿದೆ. ಚೀನಾದವರು ನಮ್ಮ ದೇಶದೊಳಗೆ ಬಂದು ಕೂತಿಲ್ಲ ಅಥವಾ ನಮ್ಮ ಯಾವುದೇ ಜಾಗ ಆಕ್ರಮಣಗೊಂಡಿಲ್ಲ ಎಂದು ಮೋದಿ ಹೇಳಿದ್ದಾರೆ. ನವದೆಹಲಿ (ಜೂ.20): ಗಡಿ ಭಾಗದಲ್ಲಿ ಚೀನಾ ಸೇನೆ ಭಾರತೀಯ ಸೈನಿಕರನ್ನು ಹತ್ಯೆ ಮಾಡಿದ ವಿಚಾರಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ಸರ್ವಪಕ್ಷ ಸಭೆ ಕರೆದಿದ್ದರು. ಈ ವೇಳೆ ಮಾತನಾಡಿದ ಮೋದಿ,…
-

ಇದು ಗುಪ್ತಚರ ಇಲಾಖೆಯ ವೈಫಲ್ಯವೇ?; ಚೀನಾ ಬಿಕ್ಕಟ್ಟಿನ ಕುರಿತು ಮೋದಿಗೆ ಸೋನಿಯಾ ಗಾಂಧಿ ಪ್ರಶ್ನೆ | | ACTPnews
Last Updated:Jun 20, 2020 8:05 AM IST ಚೀನಾ ಸೈನಿಕರು ಭಾರತದ ಗಡಿಯೊಳಗೆ ನುಸುಳಿದ್ದರಿಂದ ಈ ಸಂಘರ್ಷ ನಡೆದಿದೆ. ಇದು ಗುಪ್ತಚರ ಇಲಾಖೆಯ ವೈಫಲ್ಯ ಎಂದು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಆರೋಪಿಸಿದ್ದಾರೆ. ನವದೆಹಲಿ (ಜೂ. 20): ಲಡಾಖ್ ಬಳಿಯ ಗಾಲ್ವಾನ್ ಕಣಿವೆಯಲ್ಲಿ ಕಳೆದ ಸೋಮವಾರ ಮತ್ತು ಮಂಗಳವಾರ ನಡೆದ ಸಂಘರ್ಷದಲ್ಲಿ ಚೀನಾ ಮತ್ತು ಭಾರತದ ಅನೇಕ ಸೈನಿಕರು ಪ್ರಾಣ ತೆತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಎರಡೂ ದೇಶಗಳ ಗಡಿ ಬಿಕ್ಕಟ್ಟಿನ ಬಗ್ಗೆ ಚರ್ಚಿಸಲು ಶಕ್ರವಾರ ಪ್ರಧಾನಮಂತ್ರಿ…
-

ನಮ್ಮ ಸೈನಿಕರೇ ಚೀನಾ ಮೇಲೆ ದಾಳಿ ನಡೆಸಿದರೇ?; ಮೋದಿಗೆ ಕಾಂಗ್ರೆಸ್ ಖಡಕ್ ಪ್ರಶ್ನೆ | | ACTPnews
Last Updated:Jun 20, 2020 12:59 PM IST Indo China Conflict: ಭಾರತದ ಗಡಿಯನ್ನು ಯಾರೂ ಅತಿಕ್ರಮಣ ಮಾಡಿಲ್ಲ ಎಂದಮೇಲೆ ನಮ್ಮ ಸೈನಿಕರು ಹುತಾತ್ಮರಾಗಿದ್ದೇಕೆ? ನಮ್ಮ ಸೈನಿಕರೇ ಚೀನಾದ ಪ್ರದೇಶ ಅತಿಕ್ರಮಣ ಮಾಡಿದರೇ? ಎಂದು ಕಾಂಗ್ರೆಸ್ ಪ್ರಶ್ನೆ ಮಾಡಿದೆ. ಬೆಂಗಳೂರು (ಜೂ. 20): ಚೀನಾ ಗಡಿಯ ವಾಸ್ತವತೆ ಬಗ್ಗೆ ಕೇಂದ್ರ ಸರ್ಕಾರ ನೀಡುತ್ತಿರುವ ಹೇಳಿಕೆಗಳು ಗೊಂದಲ ಮೂಡಿಸುವಂತಿವೆ. ನಮ್ಮ ದೇಶದ ಯಾವ ಭಾಗವನ್ನೂ ಚೀನಾ ಅತಿಕ್ರಮಣ ಮಾಡಿಲ್ಲ, ಅದಕ್ಕೆ ಭಾರತೀಯ ಸೇನೆ ಅವಕಾಶವನ್ನೂ ನೀಡುವುದಿಲ್ಲ ಎಂದು…
-

ಚೀನಾ ಗಡಿತಂಟೆ ಬಗ್ಗೆ ಮೋದಿ ನೀಡಿದ ಹೇಳಿಕೆಯನ್ನ ತಿರುಚಲಾಗುತ್ತಿದೆ: ಪ್ರಧಾನಿ ಕಚೇರಿ ಸ್ಪಷ್ಟನೆ | | ACTPnews
Last Updated:Jun 20, 2020 5:04 PM IST ಎಲ್ಎಸಿಯ ನಮ್ಮ ಭಾಗದಲ್ಲಿ ಚೀನೀಯರು ಇಲ್ಲ ಎಂದು ಪ್ರಧಾನಿ ಹೇಳಿದ್ದು ನಮ್ಮ ಸೇನಾ ಪಡೆಯ ಧೈರ್ಯಶಾಲಿತನದ ಪರಿಣಾಮದಿಂದ ಆದ ಪರಿಸ್ಥಿತಿ ಕುರಿತು ಅಷ್ಟೇ. ಆದರೆ, ಈ ಹೇಳಿಕೆಯನ್ನ ಕೆಲವರು ತಿರುಚುತ್ತಿದ್ದಾರೆ ಎಂದು ಪ್ರಧಾನಿ ಕಾರ್ಯಾಲಯ ಹೇಳಿದೆ. ನವದೆಹಲಿ(ಜೂನ್ 20): ಲಡಾಖ್ನ ಭಾರತ ಮತ್ತು ಚೀನಾ ಗಡಿ ಭಾಗದಲ್ಲಿ ಕಳೆದ 5 ದಶಕದಲ್ಲೇ ಅತಿದೊಡ್ಡ ಸಂಘರ್ಷ ನಡೆದು 20 ಭಾರತೀಯ ಯೋಧರು ಹುತಾತ್ಮರಾದರು. ಈ ಘಟನೆ ಬಗ್ಗೆ ಪ್ರಧಾನಿ…
-

ಚೀನಾ ತಂಟೆಕೋರತನ ಹತ್ತಿಕ್ಕಲು ಭಾರತೀಯ ಸೇನೆಗೆ ಪೂರ್ಣ ಸ್ವಾತಂತ್ರ್ಯ: ಮೂಲಗಳ ಸ್ಪಷ್ಟನೆ | | ACTPnews
Last Updated:Jun 21, 2020 5:57 PM IST 3,500 ಕಿಮೀ ಉದ್ದದ ಚೀನಾ ಗಡಿಯಾದ್ಯಂತ ನಿಯೋಜನೆಗೊಂಡಿರುವ ಭಾರತೀಯ ಸೇನಾ ಪಡೆಗಳು ಯಾವುದೇ ಚೀನೀ ಅನುಚಿತ ವರ್ತನೆಯನ್ನು ಎದುರಿಸಲು ಪೂರ್ಣ ಸ್ವಾತಂತ್ರ್ಯ ಪಡೆದಿವೆ ಎಂದು ಮೂಲಗಳು ಹೇಳಿವೆ. ನವದೆಹಲಿ(ಜೂನ್ 21): ಚೀನಾದೊಂದಿಗೆ ಇರುವ 3,500 ಕಿಮೀ ಗಡಿ ಉದ್ದಕ್ಕೂ ನಿಯೋಜನೆಯೊಂಡಿರುವ ಭಾರತೀಯ ಸೇನೆಗೆ ಮುಕ್ತ ಹಸ್ತ ನೀಡಲಾಗಿದೆ. ಚೀನಾದ ಆಕ್ರಮಣಕಾರಿ ವರ್ತನೆಯನ್ನು ಅಲ್ಲಲ್ಲೇ ತಿರುಗಿಸಿ ನೀಡಲು ಅನುವಾಗುವಂತೆ ಏನೇ ಕ್ರಮ ಕೈಗೊಳ್ಳಲು ಸೇನೆಗೆ ಈಗ ಸ್ವಾತಂತ್ರ್ಯ ನೀಡಲಾಗಿದೆ.…
-

ಲಡಾಖ್ ಗಡಿ ಸಂಘರ್ಷ; ಚೀನಾ ಉತ್ಪನ್ನಗಳನ್ನು ನಿಷೇಧಿಸಲು ಕೇಂದ್ರ ಸರ್ಕಾರ ಸಿದ್ಧತೆ | | ACTPnews
Last Updated:Jun 22, 2020 8:00 AM IST ಆತ್ಮ ನಿರ್ಭರ ಭಾರತ್ ಉತ್ತೇಜಿಸುವ ಬಗ್ಗೆ ಸಮಾಲೋಚನೆ ನಡೆಸಲಾಗಿದ್ದು, ಚೀನಾಗಿಂತ ಕಡಿಮೆ ಬೆಲೆಯಲ್ಲಿ ಭಾರತದಲ್ಲೇ ಅಲ್ಲಿಂದ ಆಮದಾಗುವ ಉತ್ಪನ್ನಗಳನ್ನು ಉತ್ಪಾದಿಸುವ ಬಗ್ಗೆ ಚರ್ಚೆ ಮಾಡಲಾಗಿದೆ. ನವದೆಹಲಿ (ಜೂ. 22): ಭಾರತ-ಚೀನಾ ಗಡಿಯಲ್ಲಿ ಉದ್ವಿಗ್ನತೆ ನಿರ್ಮಾಣವಾಗಿರುವ ಹಿನ್ನೆಲೆಯಲ್ಲಿ ಚೀನಾ ಉತ್ಪನ್ನಗಳನ್ನು ನಿಷೇಧಿಸಲು ಕೇಂದ್ರ ಸರ್ಕಾರ ತಯಾರಿ ನಡೆಸಿದೆ. ಚೀನಾದಿಂದ ಬರುತ್ತಿರುವ ಉತ್ಪನ್ನಗಳು ಯಾವುದು? ಕಡಿಮೆ ಆಮದು ಸುಂಕ ಇರುವ ಉತ್ಪನ್ನಗಳು ಯಾವುದು? ದೇಶಿಯ ಬೆಲೆಗಳಿಗಿಂತ ಕಡಿಮೆ ದರ ಇರುವ…
Latest News
Search the Archives
Access over the years of investigative journalism and breaking reports
You May Have Missed












