Last Updated:
ಐಸಿಸಿ ಟಿ20 ವಿಶ್ವಕಪ್ ಗೆಲುವಿನ ನಂತರ, ಭಾರತೀಯ ತಂಡವು ಐರ್ಲೆಂಡ್ ಮತ್ತು ಇಂಗ್ಲೆಂಡ್ ಪ್ರವಾಸಗಳಲ್ಲಿ ಕಳಪೆ ಪ್ರದರ್ಶನ ನೀಡಿತು. ಅವರು ಸತತ ಆರು ಟಿ20 ಪಂದ್ಯಗಳಲ್ಲಿ ಒಂದೇ ಒಂದು ಪಂದ್ಯವನ್ನು ಗೆಲ್ಲಲು ವಿಫಲವಾಗಿತ್ತು. ಇದೆಲ್ಲಾ ವಿಚಾರವಾಗಿ ಗುರುವಾರ ಸುದೀರ್ಘ ಚರ್ಚೆ ನಡೆಯಲಿದೆ.
ಗುರುವಾರ ಭಾರತೀಯ ಕ್ರಿಕೆಟ್ನಲ್ಲಿ ನಿರ್ಣಾಯಕ ದಿನವಾಗಿರುತ್ತದೆ. ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI)ಮುಂಬೈನಲ್ಲಿ ಉನ್ನತ ಮಟ್ಟದ ಸಭೆ ನಡೆಸುತ್ತಿದ್ದು, ಟೀಮ್ ಇಂಡಿಯಾದ ಇತ್ತೀಚಿನ ಪ್ರದರ್ಶನ ಸೇರಿದಂತೆ ಹಲವಾರು ಪ್ರಮುಖ ವಿಷಯಗಳ ಕುರಿತು ಚರ್ಚಿಸಲಾಗುವುದು. ಹೆಚ್ಚಿನ ಗಮನ ರೋಹಿತ್ ಶರ್ಮಾ ಅವರ ಭವಿಷ್ಯದ ಮೇಲೆ ಕೇಂದ್ರೀಕೃತವಾಗಲಿದೆ. ಈ ಸಭೆಯಲ್ಲಿ 2027ರ ಏಕದಿನ ವಿಶ್ವಕಪ್ನಲ್ಲಿ (ODI World Cup 2027) ಮಾಜಿ ನಾಯಕ ರೋಹಿತ್ ಶರ್ಮಾ ಅವರ ಭವಿಷ್ಯ ಮತ್ತು ಪಾತ್ರದ ಕುರಿತು ಪ್ರಮುಖ ಚರ್ಚೆಗಳು ನಡೆಯುತ್ತಿವೆ. ಬಿಸಿಸಿಐ ಕಾರ್ಯದರ್ಶಿ ದೇವಜಿತ್ ಸೈಕಿಯಾ, ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್, ಮತ್ತು ಮುಖ್ಯ ತರಬೇತುದಾರ ಗೌತಮ್ ಗಂಭೀರ್ ಅವರನ್ನೊಳಗೊಂಡ ಈ ಸಭೆಯು ಮುಂಬೈನಲ್ಲಿರುವ ಬಿಸಿಸಿಐ ಪ್ರಧಾನ ಕಚೇರಿಯಲ್ಲಿ ಗುರುವಾರ ನಡೆಯಲಿದೆ.














