Last Updated:
ಮುಖ್ಯಮಂತ್ರಿ ವಿಜಯ್ ಅವರು ತಮ್ಮ ಕಚೇರಿಯನ್ನು ಫೋರ್ಟ್ ಸೇಂಟ್ ಜಾರ್ಜ್ನ ಮುಖ್ಯ ಬ್ಲಾಕ್ನಿಂದ ಪಕ್ಕದ ನಾಮಕ್ಕಲ್ ಕವಿಂಜರ್ ಮಾಲಿಗೈ ಕಟ್ಟಡಕ್ಕೆ ಸ್ಥಳಾಂತರಿಸುವ ಯೋಜನೆಯನ್ನು ಪ್ರಕಟಿಸಿದ ನಂತರ ಈ ವಿವಾದ ಭುಗಿಲೆದ್ದಿದೆ.
ತಮಿಳುನಾಡಿನಲ್ಲಿ ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ (C. Joseph Vijay) ನೇತೃತ್ವದ ತಮಿಳಗ ವೆಟ್ರಿ ಕಳಗಂ (TVK-Tamilaga Vettri Kazhagam) ಸರ್ಕಾರವು ಅಧಿಕಾರಕ್ಕೆ ಬಂದು 100 ದಿನಗಳನ್ನು ಪೂರೈಸಿದ ಕೆಲವೇ ದಿನಗಳಲ್ಲಿ ತನ್ನ ಮೊದಲ ಭ್ರಷ್ಟಾಚಾರದ ಆರೋಪವನ್ನು ಎದುರಿಸುತ್ತಿದೆ. ಮುಖ್ಯಮಂತ್ರಿ ವಿಜಯ್ ಅವರು ಹೊಸ ಕಚೇರಿಗೆ ಸ್ಥಳಾಂತರಗೊಳ್ಳುತ್ತಿರುವ ವಿಚಾರವಾಗಿ ವಿವಾದಕ್ಕೆ ಕಾರಣವಾಗಿದ್ದು, ವಿರೋಧ ಪಕ್ಷಗಳಾದ ದ್ರಾವಿಡ ಮುನ್ನೇತ್ರ ಕಳಗಂ (DMK) ಮತ್ತು ಭಾರತೀಯ ಜನತಾ ಪಾರ್ಟಿ (BJP) ಭ್ರಷ್ಟಾಚಾರದ ಆರೋಪಗಳನ್ನು ಮಾಡಿವೆ.














