Vaibhav Sooryavanshi: ರಾಜಸ್ಥಾನ ರಾಯಲ್ಸ್ ಅಲ್ಲ, ತನ್ನ ನೆಚ್ಚಿನ ಐಪಿಎಲ್ ತಂಡ ಬಹಿರಂಗಪಡಿಸಿದ ವೈಭವ್​ ಸೂರ್ಯವಂಶಿ! | ಕ್ರೀಡಾ ಸುದ್ದಿ | ACTPnews

ವೈಭವ್ ಸೂರ್ಯವಂಶಿ


Last Updated:

ಐಪಿಎಲ್ 2025 ರಲ್ಲಿ ಪಾದಾರ್ಪಣೆ ಮಾಡಿದ ಯುವ ಆಟಗಾರ 2026ರ ಋತುವಿನಲ್ಲಿ ಅದ್ಭುತ ಪ್ರದರ್ಶನ ನೀಡುವ ಮೂಲಕ ‘ಆರೆಂಜ್ ಕ್ಯಾಪ್’ ತಮ್ಮದಾಗಿಸಿಕೊಂಡರು. ಈ ಸಾಧನೆಯು ಇಂಗ್ಲೆಂಡ್ ಮತ್ತು ಐರ್ಲೆಂಡ್ ಪ್ರವಾಸಗಳಿಗೆ ಭಾರತೀಯ ತಂಡದಲ್ಲಿ ಆಯ್ಕೆಯಾಗಲು ದಾರಿ ಮಾಡಿಕೊಟ್ಟಿತು.

ವೈಭವ್ ಸೂರ್ಯವಂಶಿ
ವೈಭವ್ ಸೂರ್ಯವಂಶಿ
ಐಪಿಎಲ್ 2026ರ (IPL 2026) ಋತುವಿನಲ್ಲಿ ತನ್ನ ಸ್ಫೋಟಕ ಬ್ಯಾಟಿಂಗ್ ಮೂಲಕ ಕ್ರಿಕೆಟ್ ಜಗತ್ತನ್ನು ಆಕರ್ಷಿಸಿದ್ದ ಯುವ ಆಟಗಾರ ವೈಭವ್ ಸೂರ್ಯವಂಶಿ (Vaibhav Sooryavanshi) ಇದೀಗ ಅಂತಾರಾಷ್ಟ್ರೀಯ ಕ್ರಿಕೆಟ್​​ನಲ್ಲಿ ತನ್ನ ಚಾಪು ಮೂಡಿಸಲು ಸಿದ್ಧರಾಗಿದ್ದಾರೆ. ಭಾರತೀಯ ಟಿ20 (Team India) ತಂಡದಲ್ಲಿ ಸ್ಥಾನ ಪಡೆಯುವ ಮೂಲಕ ಹೊಸ ದಾಖಲೆಯನ್ನು ನಿರ್ಮಿಸಿದ್ದಾರೆ. ಐಪಿಎಲ್‌ನಲ್ಲಿ ರಾಜಸ್ಥಾನ ರಾಯಲ್ಸ್ ಪರ ಆಡುವ ಕೇವಲ 15ನೇ ವಯಸ್ಸಿನಲ್ಲಿ ಟೀಮ್ ಇಂಡಿಯಾಕ್ಕೆ ಆಯ್ಕೆಯಾಗಿದ್ದು, ಈ ಮೂಲಕ ಭಾರತ ತಂಡಕ್ಕೆ ಆಯ್ಕೆಯಾದ ಅತ್ಯಂತ ಕಿರಿಯ ಆಟಗಾರ ಎನಿಸಿಕೊಂಡಿದ್ದಾರೆ. ಐಪಿಎಲ್ 2025 ರಲ್ಲಿ ಪಾದಾರ್ಪಣೆ ಮಾಡಿದ ಯುವ ಆಟಗಾರ 2026ರ ಋತುವಿನಲ್ಲಿ ಅದ್ಭುತ ಪ್ರದರ್ಶನ ನೀಡುವ ಮೂಲಕ ‘ಆರೆಂಜ್ ಕ್ಯಾಪ್’ ತಮ್ಮದಾಗಿಸಿಕೊಂಡರು.
ಇಂಗ್ಲೆಂಡ್ ಪ್ರವಾಸಕ್ಕೆ ಆಯ್ಕೆ

ಈ ಸಾಧನೆಯು ಇಂಗ್ಲೆಂಡ್ ಮತ್ತು ಐರ್ಲೆಂಡ್ ಪ್ರವಾಸಗಳಿಗೆ ಭಾರತೀಯ ತಂಡದಲ್ಲಿ ಆಯ್ಕೆಯಾಗಲು ದಾರಿ ಮಾಡಿಕೊಟ್ಟಿತು. ಆದರೆ, ಇತ್ತೀಚಿನ ಸಂದರ್ಶನವೊಂದರಲ್ಲಿ, ರಾಜಸ್ಥಾನ ರಾಯಲ್ಸ್ ಸೇರುವ ಮೊದಲು ಸೂರ್ಯವಂಶಿ ಅವರು ಯಾವ ಐಪಿಎಲ್ ತಂಡದ ಕಟ್ಟಾ ಅಭಿಮಾನಿಯಾಗಿದ್ದರು ಎಂಬುದನ್ನು ಬಹಿರಂಗಪಡಿಸಿದ್ದಾರೆ.

ರಾಜಸ್ಥಾನ ರಾಯಲ್ಸ್ ತಮ್ಮ ಅಧಿಕೃತ ಸಾಮಾಜಿಕ ಮಾಧ್ಯಮ ಖಾತೆಯಲ್ಲಿ ಸಂದರ್ಶನದ ವೀಡಿಯೊವನ್ನು ಪೋಸ್ಟ್ ಮಾಡಿದ್ದಾರೆ. ವೀಡಿಯೊದಲ್ಲಿ, ಸೂರ್ಯವಂಶಿ ಅವರು ಐಪಿಎಲ್ ಪದಾರ್ಪಣೆಗೂ ಮುನ್ನ ಮೊದಲು ಆರ್‌ಸಿಬಿ ತಂಡದ ದೊಡ್ಡ ಅಭಿಮಾನಿಯಾಗಿದ್ದರು ಎಂದು ಬಹಿರಂಗಪಡಿಸಿದ್ದಾರೆ. ವಿರಾಟ್ ಕೊಹ್ಲಿ ಮೇಲಿನ ಅಭಿಮಾನವೇ ಆರ್‌ಸಿಬಿಯನ್ನು ಬೆಂಬಲಿಸಲು ಪ್ರಮುಖ ಕಾರಣ ಎಂದು ಅವರು ವಿವರಿಸಿದ್ದಾರೆ. ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಸೇರುವ ಮೊದಲೇ ವಿರಾಟ್ ಕೊಹ್ಲಿಯ ಆಟವನ್ನು ಬಹಳ ಹಿಂದಿನಿಂದಲೂ ಮೆಚ್ಚಿಕೊಂಡಿದ್ದೇನೆ ಎಂದು ಯುವ ಕ್ರಿಕೆಟಿಗ ಹೇಳಿದ್ದಾರೆ.

ವಿರಾಟ್​​ ಮಹತ್ವದ ಸಲಹೆ

ಇದೇ ಸಂದರ್ಭದಲ್ಲಿ ವೈಭವ್ ಸೂರ್ಯವಂಶಿ ಮೊದಲ ಬಾರಿಗೆ ‘ರನ್ ಮೆಷಿನ್’ ವಿರಾಟ್ ಕೊಹ್ಲಿಯನ್ನು ಭೇಟಿಯಾದ ಅನುಭವವನ್ನು ಹಂಚಿಕೊಂಡಿದ್ದಾರೆ. “ಪ್ರಾಮಾಣಿಕವಾಗಿ ಹೇಳಬೇಕೆಂದರೆ, ವಿರಾಟ್ ಭಯ್ಯಾ ನನ್ನ ಭುಜದ ಮೇಲೆ ಕೈಯಿಟ್ಟು ನನ್ನೊಂದಿಗೆ ಮಾತನಾಡಿದಾಗ, ಅದು ಕನಸಿನಂತೆ ಭಾಸವಾಯಿತು. ಆದರೆ ನಾನು ಕ್ರಿಕೆಟ್​ ಜಗತ್ತಿನ ಸೂಪರ್‌ಸ್ಟಾರ್‌ನೊಂದಿಗೆ ಮಾತನಾಡುತ್ತಿದ್ದೇನೆ ಎಂದು ನನಗೆ ಅನಿಸಲಿಲ್ಲ. ನನ್ನ ಸ್ವಂತ ಅಣ್ಣನೊಂದಿಗೆ ಮಾತನಾಡುವಷ್ಟು ಆರಾಮದಾಯಕವಾಗಿತ್ತು. ಅವರು ನನ್ನೊಂದಿಗೆ ಅನೇಕ ಮಾಹಿತಿಗಳನ್ನ ಹಂಚಿಕೊಂಡರು ಮತ್ತು ನನ್ನ ಬ್ಯಾಟಿಂಗ್‌ನಲ್ಲಿನ ದೋಷಗಳನ್ನು ಸರಿಪಡಿಸಿಕೊಳ್ಳಲು ವಿವರಿಸಿದರು. ಅವರು ಯಾವಾಗಲೂ ಆಟದ ಮೇಲೆ ಗಮನಹರಿಸಿಕೊಂಡು ಮುಂದುವರಿಯುವಂತೆ ಸಲಹೆ ನೀಡಿದರು. ಆ ಕ್ಷಣ ಯಾವಾಗಲೂ ನನ್ನ ಜೀವನದಲ್ಲಿ ಬಹಳ ವಿಶೇಷವಾಗಿ ಉಳಿಯುತ್ತದೆ,” ಎಂದು ವೈಭವ್ ಸೂರ್ಯವಂಶಿ ಭಾವನಾತ್ಮಕವಾಗಿ ಹೇಳಿದ್ದಾರೆ.

ಅಸಾಧಾರಣ ಪ್ರದರ್ಶನವೇ ಕಾರಣ

ಟೀಮ್ ಇಂಡಿಯಾದ ಮುಖ್ಯ ಆಯ್ಕೆದಾರ ಅಜಿತ್ ಅಗರ್ಕರ್, ಭಾರತ ಟಿ20 ತಂಡಕ್ಕೆ ವೈಭವ್ ಸೂರ್ಯವಂಶಿ ಅವರನ್ನು ಇಷ್ಟು ಚಿಕ್ಕ ವಯಸ್ಸಿನಲ್ಲಿ ಆಯ್ಕೆ ಮಾಡಿದ್ದಕ್ಕೆ ಕಾರಣ ಬಹಿರಂಗಪಡಿಸಿದ್ದಾರೆ. ಐರ್ಲೆಂಡ್ ಮತ್ತು ಇಂಗ್ಲೆಂಡ್ ಸರಣಿಗೆ ವೈಭವ್ ಸೂರ್ಯವಂಶಿ ಅವರನ್ನು ಆಯ್ಕೆ ಮಾಡಿದ ಬಗ್ಗೆ ಮಾತನಾಡಿದ ಅಜಿತ್ ಅಗರ್ಕರ್, ” ವೈಭವ್ ಸೂರ್ಯವಂಶಿ ಅವರ ಅಸಾಧಾರಣ ಪ್ರದರ್ಶನವೇ ನಾವು ಅವರನ್ನು ಆಯ್ಕೆ ಮಾಡಲು ಕಾರಣವಾಯಿತು. ಅವರು ತುಂಬಾ ಚಿಕ್ಕವರಾಗಿರಬಹುದು, ಆದರೆ ಕಳೆದ ಎರಡು ಐಪಿಎಲ್ ಋತುಗಳಲ್ಲಿ ಅವರು ಬ್ಯಾಟಿಂಗ್ ಮಾಡಿದ ರೀತಿ ಅವರ ಅಗಾಧ ಪ್ರತಿಭೆಯನ್ನು ಸ್ಪಷ್ಟವಾಗಿ ಬಹಿರಂಗಪಡಿಸುತ್ತದೆ. ಎಲ್ಲರಂತೆ, ನಮಗೂ ವೈಭವ್ ಅವರ ಭವಿಷ್ಯದ ಬಗ್ಗೆ ಹೆಚ್ಚಿನ ನಿರೀಕ್ಷೆಗಳಿವೆ” ಎಂದು ಹೇಳಿದರು.



Source link

Leave a Reply

Your email address will not be published. Required fields are marked *

Latest News

View All

Search the Archives

Access over the years of investigative journalism and breaking reports

You May Have Missed