ಗಾಲ್ವನ್ ಕಣಿವೆಯ ಘಟನೆ ಕಳವಳಕಾರಿ; ಪ್ರಧಾನಿ, ರಕ್ಷಣಾ ಸಚಿವರು ಸ್ಪಷ್ಟನೆ ನೀಡಲಿ: ದೇವೇಗೌಡ | | ACTPnews

ಗಾಲ್ವನ್ ಕಣಿವೆಯ ಘಟನೆ ಕಳವಳಕಾರಿ; ಪ್ರಧಾನಿ, ರಕ್ಷಣಾ ಸಚಿವರು ಸ್ಪಷ್ಟನೆ ನೀಡಲಿ: ದೇವೇಗೌಡ |


Last Updated:

ಪರಿಸ್ಥಿತಿ ತಿಳಿಗೊಳಿಸುವ ಪ್ರಕ್ರಿಯೆಯಲ್ಲಿ ನಮ್ಮ ಸೈನಿಕರ ಜೀವ ಯಾಕೆ ಹೋಗುವಂತಾಯಿತು? ರಾಷ್ಟ್ರದ ಹಿತಾಸಕ್ತಿಯಿಂದ ಪ್ರಧಾನಿ ಮತ್ತು ರಕ್ಷಣಾ ಮಂತ್ರಿಗಳು ಚೀನಾದೊಂದಿಗೆ ಗಡಿ ವಿವಾದದ ಬಗ್ಗೆ ಸ್ಪಷ್ಟ ಚಿತ್ರಣವನ್ನು ದೇಶದ ಮುಂದಿಡಲಿ ಎಂದು ಗೌಡರು ಆಗ್ರಹಿಸಿ ಟ್ವೀಟ್ ಮಾಡಿದ್ದಾರೆ.

ಬೆಂಗಳೂರು(ಜೂನ್ 16): ಲಡಾಖ್ ಗಡಿಭಾಗದ ಗಾಲ್ವನ್ ಕಣಿವೆಯಲ್ಲಿ ಭಾರತ ಮತ್ತು ಚೀನಾ ಸೈನಿಕರ ಮಧ್ಯೆ ಸಂಘರ್ಷ ನಡೆದು ಹಲವು ಜೀವ ಬಲಿಗಳಾಗಿವೆ. ಚೀನಾ ಪದೇ ಪದೇ ತಂಟೆತನ ತೋರುತ್ತಲೇ ಬಂದಿದೆ. ಗಡಿಭಾಗದಲ್ಲಿ ಪ್ರಕ್ಷುಬ್ದ ವಾತಾವರಣ ನಿರ್ಮಾಣವಾಗಿದೆ. ಈ ಪರಿಸ್ಥಿತಿ ಬಗ್ಗೆ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಅವರು ಕಳವಳ ವ್ಯಕ್ತಪಡಿಸಿದ್ಧಾರೆ. ಗಾಲ್ವನ್ ಕಣಿವೆಯಲ್ಲಿನ ಪರಿಸ್ಥಿತಿ ಬಗ್ಗೆ ಬರುತ್ತಿರುವ ವರದಿಗಳು ಚಿಂತೆ ಮೂಡಿಸುವಂತಿವೆ ಎಂದು ಅವರು ಹೇಳಿದ್ಧಾರೆ.

ಪರಿಸ್ಥಿತಿ ತಿಳಿಗೊಳಿಸುವ ಪ್ರಕ್ರಿಯೆಯಲ್ಲಿ ನಮ್ಮ ಸೈನಿಕರ ಜೀವ ಯಾಕೆ ಹೋಗುವಂತಾಯಿತು? ರಾಷ್ಟ್ರದ ಹಿತಾಸಕ್ತಿಯಿಂದ ಪ್ರಧಾನಿ ಮತ್ತು ರಕ್ಷಣಾ ಮಂತ್ರಿಗಳು ಚೀನಾದೊಂದಿಗೆ ಗಡಿ ವಿವಾದದ ಬಗ್ಗೆ ಸ್ಪಷ್ಟ ಚಿತ್ರಣವನ್ನು ದೇಶದ ಮುಂದಿಡಲಿ ಎಂದು ಗೌಡರು ಆಗ್ರಹಿಸಿ ಟ್ವೀಟ್ ಮಾಡಿದ್ದಾರೆ.

ನಿನ್ನೆ ರಾತ್ರಿ ಈ ಹಿಂಸಾಚಾರ ನಡೆದಿರುವುದು ಬೆಳಕಿಗೆ ಬಂದಿದೆ. ಚೀನೀ ಸೈನಿಕರು ಎಲ್​ಎಸಿ ಗಡಿಭಾಗದಲ್ಲಿ ಅತಿಕ್ರಮಣ ಮಾಡಿದ್ದರಿಂದ ಗಾಲ್ವನ್ ಕಣಿವೆಯಲ್ಲಿ ಹಲವಾರು ದಿನಗಳಿಂದಲೂ ಪ್ರಕ್ಷುಬ್ದ ವಾತಾವರಣ ಇದೆ. ವಿವಿಧ ಹಂತಗಳಲ್ಲಿ ಮಾತುಕತೆ ನಡೆದ ಬಳಿಕ ಎರಡೂ ಕಡೆಯ ಸೈನಿಕರನ್ನ ಹಿಂಪಡೆಯಲು ನಿರ್ಧರಿಸಲಾಯಿತು. ಅದರಂತೆ ಡೀ ಎಸ್ಕಲೇಶನ್ ಪ್ರಕ್ರಿಯೆ ಆಗಿತ್ತು. ಈ ಸಂದರ್ಭದಲ್ಲೇ ಹಿಂಸಾಚಾರ ಆಗಿರುವುದು ಕಳವಳ ಮೂಡಿಸಿದೆ.

ಆದರೆ, ಯಾವ ರೀತಿಯ ಹಿಂಸಾಚಾರವಾಯಿತು ಎಂಬುದು ಗೊತ್ತಾಗಿಲ್ಲ. ಗುಂಡಿನ ಚಕಮಕಿ ಆಗಿಲ್ಲ ಎನ್ನುತ್ತಿವೆ ಮೂಲಗಳು.  ಎರಡೂ ಕಡೆಯ ಸೈನಿಕರು ಮುಖಾಮುಖಿಯಾದಾಗ ಬೇರೆ ರೀತಿಯಲ್ಲಿ ಘರ್ಷಣೆ ಆಗಿದೆ. ಈ ಸಂದರ್ಭದಲ್ಲಿ ಭಾರತದ ಕಮಾಂಡಿಂಗ್ ಅಧಿಕಾರಿ ಹಾಗೂ ಇಬ್ಬರು ಸೈನಿಕರು ಸಾವನ್ನಪ್ಪಿದ್ಧಾರೆ. ಚೀನಾ ಕಡೆ ಐವರು ಸಾವನ್ನಪ್ಪಿದ್ಧಾರೆ ಎಂದು ಭಾರತೀಯ ಸೇನೆ ಹೇಳಿಕೆ ನೀಡಿದೆ. ಆದರೆ, ಚೀನಾದ ಮುಖವಾಣಿ ಗ್ಲೋಬಲ್ ಟೈಮ್ಸ್ ಪತ್ರಿಕೆ ಯಾವುದೇ ಸಾವಿನ ಸಂಖ್ಯೆ ಪ್ರಕಟಿಸಿಲ್ಲವಾದರೂ ಭಾರತೀಯ ಸೈನಿಕರಿದಂದ ಚೀನೀ ಸೇನೆಗೆ ಹಾನಿಯಾಗಿದೆ ಎಂದು ಹೇಳಿದೆ.



Source link

Leave a Reply

Your email address will not be published. Required fields are marked *

Latest News

View All

Search the Archives

Access over the years of investigative journalism and breaking reports

You May Have Missed